3:05 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್

03/11/2021, 14:04

ಮುಂಬಯಿ (Reporterkarnataka.com)

ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿ‌ಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್‌ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್‌ ಇಂಜಿನಿಯರಿಂಗ್‌ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

2015 ರಲ್ಲಿಯೇ ಸಿವಿಲ್‌ ಇಂಜಿನಿಯರಿಂಗ್‌ ಪದವಿ ಪಡೆದ ಉಮೇಶ್‌ ಪಾಟೀಲ್‌ (27) ನಂತರ ಕಾಂಟ್ರಾಕ್ಟರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಕಾಂಟ್ರಾಕ್ಟರ್‌ ಕೆಲಸದಲ್ಲಿ ಬರುವ ಸಂಬಳದಲ್ಲಿ ತನ್ನ ಖರ್ಚು ಹಾಗೂ ತನ್ನ ಗೆಳತಿಯ ಖರ್ಚನ್ನು ನಿಭಾಯಿಸಲು ಆಗುತ್ತಿರಲಿಲ್ಲಾ.

ಬೇರೆ ಕೆಲಸ ಮಾಡುವಂತ ಶ್ರಮಜೀವಿಯೂ ಈತನಾಗಿರಲಿಲ್ಲ. ಈ ಕಾರಣದಿಂದ ಸುಲಭ ವಿಧಾನದಲ್ಲಿ ಆದಾಯ ಗಳಿಸಬೇಕೆಂಬುದು ಉಮೇಶ್‌ ಪಾಟೀಲ್‌ ಲೆಕ್ಕಾಚಾರವಾಗಿತ್ತು.

ಇಷ್ಟೇ ಅಲ್ಲದೇ ಉಮೇಶ್‌ ಪಾಟೀಲ್‌ ಸರಕಳ್ಳತನ ಮಾಡಿದ 45 ಲಕ್ಷ ಹಣದಿಂದ ಫ್ಲಾಟ್‌ ಖರೀದಿಸಿದ್ದಾನೆ. ಅಲ್ಲದೇ ಉಮೇಶ್‌ ಪಾಟೀಲ್‌ ಬ್ಯಾಂಕ್‌ ಅಕೌಂಟ್‌ ನಲ್ಲಿ 20 ಲಕ್ಷ ರೂಪಾಯಿ ಬ್ಯಾಲೆನ್ಸ್‌ ಕೂಡ ಪತ್ತೆಯಾಗಿದೆ. ಗೆಳತಿ ಜೊತೆ ಸುತ್ತಾಡಲು ಹಾಗೂ ಐಷಾರಾಮಿ ಜೀವನ ನಡೆಸಲು ತನ್ನ ವೇತನ ಸಾಲುತ್ತಿರಲಿಲ್ಲಾ ಹೀಗಾಗಿ ಸರಕಳ್ಳತನಕ್ಕೆ ಇಳಿದಿರುವುದಾಗಿ ಪೋಲಿಸರ ಮುಂದೆ ಉಮೇಶ್‌ ಪಾಟೀಲ್‌ ಬಾಯಿ ಬಿಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು