10:07 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು