10:13 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು