5:06 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು