12:10 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು