3:17 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಖಾಯಂ ಕಲಿಕಾ ಕೇಂದ್ರ ಉದ್ಘಾಟನೆ

04/11/2021, 10:15

ಮಂಗಳೂರು(reporterkarnataka.com):

ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ, ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸಾಕ್ಷರತಾ ಸಮಿತಿಯ ಸಹಭಾಗಿತ್ವದೊಂದಿಗೆ ಕಾರಾಗೃಹದಲ್ಲಿನ ಅನಕ್ಷರಸ್ಥ ಮತ್ತು ಅರೆ ಅಕ್ಷರಸ್ಥ ಬಂದಿಗಳಿಗೆ ‘ಕಲಿಕೆಯಿಂದ ಬದಲಾವಣೆ’ ಎಂಬ ಸಾಕ್ಷರತಾ ಕಾರ್ಯಕ್ರಮದ ಖಾಯಂ ಕಲಿಕಾ ಕೇಂದ್ರವನ್ನು ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಉದ್ಘಾಟಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ.,  ಜೈಲಿನಲ್ಲಿರುವ ಅನಕ್ಷರಸ್ಥ ಮತ್ತು ಆರೆ ಅಕ್ಷರಸ್ಥ ಬಂದಿಗಳು ಈ ಕಾರ್ಯಕ್ರಮದ ಮೂಲಕ ಸಾಕ್ಷರರಾಗಲು

ಒಂದು ಉತ್ತಮ ಅವಕಾಶವನ್ನು ಸರಕಾರದಿಂದ ಕಲ್ಪಿಸಲಾಗಿದೆ, ದೊರೆತ ಅವಕಾಶದ ಸದುಪಯೋಗಪಡಿಸಿಕೊಂಡು

ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗುವಂತೆ  ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ ಕಾರಾಗೃಹದ ಅಧೀಕ್ಷಕ ಚಂದನ್ ಜೆ. ಪಟೇಲ್ ಮಾತನಾಡಿ, ಇದು ದೇಶದಲ್ಲಿಯೇ ವಿನೂತನ ಕಾರ್ಯಕ್ರಮವಾಗಿದ್ದು, ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಇಂದಿನಿಂದ ಏಕಕಾಲದಲ್ಲಿ ಚಾಲನೆ ದೊರೆತಿದೆ. ಕಾರಾಗೃಹಕ್ಕೆ ಬರುವಾಗ ಅನಕ್ಷರಸ್ಥರಾಗಿರುವ ಬಂದಿಗಳು ಬಿಡುಗಡೆ ಹೊಂದುವುದರೊಳಗಾಗಿ ಅಕ್ಷರಸ್ಥರನ್ನಾಗಿ ಮಾಡುವುದೇ ಈ ಕಾರ್ಯಕ್ರಮದ ಗುರಿಯಾಗಿದೆ ಹಾಗೂ ಇದರಲ್ಲಿ ಅಕ್ಷರಸ್ಥ ಬಂದಿಗಳು ಅನಕ್ಷರಸ್ಥ ಬಂದಿಗಳ ಕಲಿಕೆ ಚಟುವಟಿಕೆಯಲ್ಲಿ ನೆರವಾಗಲಿರುವುದು ವಿಶೇಷತೆಯಾಗಿದೆ ಎಂದು

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಧರ್ಮಗಿರಿ ರಾಮಸ್ವಾಮಿ ಸುಬ್ಬಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ಸಹಾಯಕ ಪೊಲೀಸ್ ಆಯುಕ್ತ ರವೀಶ್ ನಾಯಕ್, ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ಸುಧಾಕರ, ಮತ್ತು ಜನಶಿಕ್ಷಣ ಟ್ರಸ್ಟ್ ನ  ನಿರ್ದೇಶಕ ಶೀನ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 9 ಜನ ಅನಕ್ಷರಸ್ಥ ಹಾಗೂ 5 ಜನ ಅರೆ ಅಕ್ಷರಸ್ಥ ಬಂದಿಗಳಿಗೆ ಕಲಿಕಾ ಕಿಟ್ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು