6:40 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಖಾಯಂ ಕಲಿಕಾ ಕೇಂದ್ರ ಉದ್ಘಾಟನೆ

04/11/2021, 10:15

ಮಂಗಳೂರು(reporterkarnataka.com):

ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ, ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸಾಕ್ಷರತಾ ಸಮಿತಿಯ ಸಹಭಾಗಿತ್ವದೊಂದಿಗೆ ಕಾರಾಗೃಹದಲ್ಲಿನ ಅನಕ್ಷರಸ್ಥ ಮತ್ತು ಅರೆ ಅಕ್ಷರಸ್ಥ ಬಂದಿಗಳಿಗೆ ‘ಕಲಿಕೆಯಿಂದ ಬದಲಾವಣೆ’ ಎಂಬ ಸಾಕ್ಷರತಾ ಕಾರ್ಯಕ್ರಮದ ಖಾಯಂ ಕಲಿಕಾ ಕೇಂದ್ರವನ್ನು ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಉದ್ಘಾಟಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ.,  ಜೈಲಿನಲ್ಲಿರುವ ಅನಕ್ಷರಸ್ಥ ಮತ್ತು ಆರೆ ಅಕ್ಷರಸ್ಥ ಬಂದಿಗಳು ಈ ಕಾರ್ಯಕ್ರಮದ ಮೂಲಕ ಸಾಕ್ಷರರಾಗಲು

ಒಂದು ಉತ್ತಮ ಅವಕಾಶವನ್ನು ಸರಕಾರದಿಂದ ಕಲ್ಪಿಸಲಾಗಿದೆ, ದೊರೆತ ಅವಕಾಶದ ಸದುಪಯೋಗಪಡಿಸಿಕೊಂಡು

ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗುವಂತೆ  ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ ಕಾರಾಗೃಹದ ಅಧೀಕ್ಷಕ ಚಂದನ್ ಜೆ. ಪಟೇಲ್ ಮಾತನಾಡಿ, ಇದು ದೇಶದಲ್ಲಿಯೇ ವಿನೂತನ ಕಾರ್ಯಕ್ರಮವಾಗಿದ್ದು, ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಇಂದಿನಿಂದ ಏಕಕಾಲದಲ್ಲಿ ಚಾಲನೆ ದೊರೆತಿದೆ. ಕಾರಾಗೃಹಕ್ಕೆ ಬರುವಾಗ ಅನಕ್ಷರಸ್ಥರಾಗಿರುವ ಬಂದಿಗಳು ಬಿಡುಗಡೆ ಹೊಂದುವುದರೊಳಗಾಗಿ ಅಕ್ಷರಸ್ಥರನ್ನಾಗಿ ಮಾಡುವುದೇ ಈ ಕಾರ್ಯಕ್ರಮದ ಗುರಿಯಾಗಿದೆ ಹಾಗೂ ಇದರಲ್ಲಿ ಅಕ್ಷರಸ್ಥ ಬಂದಿಗಳು ಅನಕ್ಷರಸ್ಥ ಬಂದಿಗಳ ಕಲಿಕೆ ಚಟುವಟಿಕೆಯಲ್ಲಿ ನೆರವಾಗಲಿರುವುದು ವಿಶೇಷತೆಯಾಗಿದೆ ಎಂದು

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಧರ್ಮಗಿರಿ ರಾಮಸ್ವಾಮಿ ಸುಬ್ಬಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ಸಹಾಯಕ ಪೊಲೀಸ್ ಆಯುಕ್ತ ರವೀಶ್ ನಾಯಕ್, ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ಸುಧಾಕರ, ಮತ್ತು ಜನಶಿಕ್ಷಣ ಟ್ರಸ್ಟ್ ನ  ನಿರ್ದೇಶಕ ಶೀನ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 9 ಜನ ಅನಕ್ಷರಸ್ಥ ಹಾಗೂ 5 ಜನ ಅರೆ ಅಕ್ಷರಸ್ಥ ಬಂದಿಗಳಿಗೆ ಕಲಿಕಾ ಕಿಟ್ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು