11:49 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಂಗಳೂರು: ದೀಪಾವಳಿ ದಿನವೇ ರಥಬೀದಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಟೂರ್ ಮೆನೇಜರ್ ಭೀಕರ ಕೊಲೆ

04/11/2021, 12:02

ಮಂಗಳೂರು(reporterkarnataka.com):

ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ವೊಂದರಲ್ಲಿ ಬುಧವಾರ ರಾತ್ರಿ ವಿನಾಯಕ ಕಾಮತ್ ಎಂಬುವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅದೇ ಅಪಾರ್ಟ್ ಮೆಂಟಿನ ನಿವಾಸಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಮಗ ಅವಿನಾಶ್ ಕಿಣಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್ ಮೆಂಟ್  ಈ ಹತ್ಯೆ ನಡೆದಿದೆ. ವಿನಾಯಕ ಕಾಮತ್  ಎಂಬವರು ಪತ್ನಿ ಅಮಣಿ ಕಾಮತ್, ಪುತ್ರ ಮೂರುವರೆ ವರ್ಷ ಪ್ರಾಯದ ಉತ್ತಮ ಕಾಮತ್ ಹಾಗೂ ಅತ್ತೆ ವಿಜಯಲಕ್ಷ್ಮೀ ಕಾಮತ್ ಅವರ ಜತೆ ಕಳೆದ 5 ವರ್ಷಗಳಿಂದ ಇದೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು. ಕೊಲೆ ಆರೋಪಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಪುತ್ರ ಅವಿನಾಶ್ ಕಿಣಿ ಕೂಡ ಇದೇ ಅಪಾರ್ಟ್ ಮೆಂಟ್ ನ ನಿವಾಸಿಗಳಾಗಿದ್ದಾರೆ. ವಿಕ್ರಮ ಟ್ರಾವೆಲ್ಸ್ ನಲ್ಲಿ ಟೂರ್ ಮೆನೇಜರ್ ಆಗಿರುವ ವಿನಾಯಕ

ಕಾಮತ್ ಅವರ ಜತೆ ಆರೋಪಿಗಳು ಈ ಹಿಂದೆ ಕ್ಷುಲ್ಲಕ ವಿಷಯಕ್ಕೆ ಜಗಳವಾಡಿದ್ದರು. ಬುಧವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅಪಾರ್ಟ್ ಮೆಂಟ್ ನವರು ಕೆಳಗಡೆ ಪಟಾಕಿ ಸಿಡಿಸುತ್ತಿದ್ದಾಗ ವಿನಾಯಕ ಕಾಮತ್ ಕೂಡ ಅಲ್ಲಿಗೆ ಹೋಗಿದ್ದರು. ಇದೇ ವೇಳೆ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕಾರ್ ಪಾರ್ಕಿಂಗ್ ಸ್ಥಳದಲ್ಲಿ

ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದ್ದಾರೆ. ತೀವ್ರ ಗಾಯಗೊಂಡ ವಿನಾಯಕ ಕಾಮತ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30ರ ವೇಳೆಗೆ ಮೃತಪಟ್ಟಿದ್ದಾರೆ.

ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕೊಲೆ ಮಾಡುವ ಉದ್ದೇಶದಿಂದಲೇ ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು