7:34 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ದೀಪಾವಳಿ ದಿನವೇ ರಥಬೀದಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಟೂರ್ ಮೆನೇಜರ್ ಭೀಕರ ಕೊಲೆ

04/11/2021, 12:02

ಮಂಗಳೂರು(reporterkarnataka.com):

ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ವೊಂದರಲ್ಲಿ ಬುಧವಾರ ರಾತ್ರಿ ವಿನಾಯಕ ಕಾಮತ್ ಎಂಬುವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅದೇ ಅಪಾರ್ಟ್ ಮೆಂಟಿನ ನಿವಾಸಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಮಗ ಅವಿನಾಶ್ ಕಿಣಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್ ಮೆಂಟ್  ಈ ಹತ್ಯೆ ನಡೆದಿದೆ. ವಿನಾಯಕ ಕಾಮತ್  ಎಂಬವರು ಪತ್ನಿ ಅಮಣಿ ಕಾಮತ್, ಪುತ್ರ ಮೂರುವರೆ ವರ್ಷ ಪ್ರಾಯದ ಉತ್ತಮ ಕಾಮತ್ ಹಾಗೂ ಅತ್ತೆ ವಿಜಯಲಕ್ಷ್ಮೀ ಕಾಮತ್ ಅವರ ಜತೆ ಕಳೆದ 5 ವರ್ಷಗಳಿಂದ ಇದೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು. ಕೊಲೆ ಆರೋಪಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಪುತ್ರ ಅವಿನಾಶ್ ಕಿಣಿ ಕೂಡ ಇದೇ ಅಪಾರ್ಟ್ ಮೆಂಟ್ ನ ನಿವಾಸಿಗಳಾಗಿದ್ದಾರೆ. ವಿಕ್ರಮ ಟ್ರಾವೆಲ್ಸ್ ನಲ್ಲಿ ಟೂರ್ ಮೆನೇಜರ್ ಆಗಿರುವ ವಿನಾಯಕ

ಕಾಮತ್ ಅವರ ಜತೆ ಆರೋಪಿಗಳು ಈ ಹಿಂದೆ ಕ್ಷುಲ್ಲಕ ವಿಷಯಕ್ಕೆ ಜಗಳವಾಡಿದ್ದರು. ಬುಧವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅಪಾರ್ಟ್ ಮೆಂಟ್ ನವರು ಕೆಳಗಡೆ ಪಟಾಕಿ ಸಿಡಿಸುತ್ತಿದ್ದಾಗ ವಿನಾಯಕ ಕಾಮತ್ ಕೂಡ ಅಲ್ಲಿಗೆ ಹೋಗಿದ್ದರು. ಇದೇ ವೇಳೆ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕಾರ್ ಪಾರ್ಕಿಂಗ್ ಸ್ಥಳದಲ್ಲಿ

ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದ್ದಾರೆ. ತೀವ್ರ ಗಾಯಗೊಂಡ ವಿನಾಯಕ ಕಾಮತ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30ರ ವೇಳೆಗೆ ಮೃತಪಟ್ಟಿದ್ದಾರೆ.

ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕೊಲೆ ಮಾಡುವ ಉದ್ದೇಶದಿಂದಲೇ ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು