9:43 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಮಂಗಳೂರು: ದೀಪಾವಳಿ ದಿನವೇ ರಥಬೀದಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಟೂರ್ ಮೆನೇಜರ್ ಭೀಕರ ಕೊಲೆ

04/11/2021, 12:02

ಮಂಗಳೂರು(reporterkarnataka.com):

ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ವೊಂದರಲ್ಲಿ ಬುಧವಾರ ರಾತ್ರಿ ವಿನಾಯಕ ಕಾಮತ್ ಎಂಬುವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅದೇ ಅಪಾರ್ಟ್ ಮೆಂಟಿನ ನಿವಾಸಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಮಗ ಅವಿನಾಶ್ ಕಿಣಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್ ಮೆಂಟ್  ಈ ಹತ್ಯೆ ನಡೆದಿದೆ. ವಿನಾಯಕ ಕಾಮತ್  ಎಂಬವರು ಪತ್ನಿ ಅಮಣಿ ಕಾಮತ್, ಪುತ್ರ ಮೂರುವರೆ ವರ್ಷ ಪ್ರಾಯದ ಉತ್ತಮ ಕಾಮತ್ ಹಾಗೂ ಅತ್ತೆ ವಿಜಯಲಕ್ಷ್ಮೀ ಕಾಮತ್ ಅವರ ಜತೆ ಕಳೆದ 5 ವರ್ಷಗಳಿಂದ ಇದೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು. ಕೊಲೆ ಆರೋಪಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಪುತ್ರ ಅವಿನಾಶ್ ಕಿಣಿ ಕೂಡ ಇದೇ ಅಪಾರ್ಟ್ ಮೆಂಟ್ ನ ನಿವಾಸಿಗಳಾಗಿದ್ದಾರೆ. ವಿಕ್ರಮ ಟ್ರಾವೆಲ್ಸ್ ನಲ್ಲಿ ಟೂರ್ ಮೆನೇಜರ್ ಆಗಿರುವ ವಿನಾಯಕ

ಕಾಮತ್ ಅವರ ಜತೆ ಆರೋಪಿಗಳು ಈ ಹಿಂದೆ ಕ್ಷುಲ್ಲಕ ವಿಷಯಕ್ಕೆ ಜಗಳವಾಡಿದ್ದರು. ಬುಧವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅಪಾರ್ಟ್ ಮೆಂಟ್ ನವರು ಕೆಳಗಡೆ ಪಟಾಕಿ ಸಿಡಿಸುತ್ತಿದ್ದಾಗ ವಿನಾಯಕ ಕಾಮತ್ ಕೂಡ ಅಲ್ಲಿಗೆ ಹೋಗಿದ್ದರು. ಇದೇ ವೇಳೆ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕಾರ್ ಪಾರ್ಕಿಂಗ್ ಸ್ಥಳದಲ್ಲಿ

ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದ್ದಾರೆ. ತೀವ್ರ ಗಾಯಗೊಂಡ ವಿನಾಯಕ ಕಾಮತ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30ರ ವೇಳೆಗೆ ಮೃತಪಟ್ಟಿದ್ದಾರೆ.

ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕೊಲೆ ಮಾಡುವ ಉದ್ದೇಶದಿಂದಲೇ ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು