6:40 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಗಳೂರು: ದೀಪಾವಳಿ ದಿನವೇ ರಥಬೀದಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಟೂರ್ ಮೆನೇಜರ್ ಭೀಕರ ಕೊಲೆ

04/11/2021, 12:02

ಮಂಗಳೂರು(reporterkarnataka.com):

ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ವೊಂದರಲ್ಲಿ ಬುಧವಾರ ರಾತ್ರಿ ವಿನಾಯಕ ಕಾಮತ್ ಎಂಬುವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅದೇ ಅಪಾರ್ಟ್ ಮೆಂಟಿನ ನಿವಾಸಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಮಗ ಅವಿನಾಶ್ ಕಿಣಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್ ಮೆಂಟ್  ಈ ಹತ್ಯೆ ನಡೆದಿದೆ. ವಿನಾಯಕ ಕಾಮತ್  ಎಂಬವರು ಪತ್ನಿ ಅಮಣಿ ಕಾಮತ್, ಪುತ್ರ ಮೂರುವರೆ ವರ್ಷ ಪ್ರಾಯದ ಉತ್ತಮ ಕಾಮತ್ ಹಾಗೂ ಅತ್ತೆ ವಿಜಯಲಕ್ಷ್ಮೀ ಕಾಮತ್ ಅವರ ಜತೆ ಕಳೆದ 5 ವರ್ಷಗಳಿಂದ ಇದೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು. ಕೊಲೆ ಆರೋಪಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಪುತ್ರ ಅವಿನಾಶ್ ಕಿಣಿ ಕೂಡ ಇದೇ ಅಪಾರ್ಟ್ ಮೆಂಟ್ ನ ನಿವಾಸಿಗಳಾಗಿದ್ದಾರೆ. ವಿಕ್ರಮ ಟ್ರಾವೆಲ್ಸ್ ನಲ್ಲಿ ಟೂರ್ ಮೆನೇಜರ್ ಆಗಿರುವ ವಿನಾಯಕ

ಕಾಮತ್ ಅವರ ಜತೆ ಆರೋಪಿಗಳು ಈ ಹಿಂದೆ ಕ್ಷುಲ್ಲಕ ವಿಷಯಕ್ಕೆ ಜಗಳವಾಡಿದ್ದರು. ಬುಧವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅಪಾರ್ಟ್ ಮೆಂಟ್ ನವರು ಕೆಳಗಡೆ ಪಟಾಕಿ ಸಿಡಿಸುತ್ತಿದ್ದಾಗ ವಿನಾಯಕ ಕಾಮತ್ ಕೂಡ ಅಲ್ಲಿಗೆ ಹೋಗಿದ್ದರು. ಇದೇ ವೇಳೆ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕಾರ್ ಪಾರ್ಕಿಂಗ್ ಸ್ಥಳದಲ್ಲಿ

ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದ್ದಾರೆ. ತೀವ್ರ ಗಾಯಗೊಂಡ ವಿನಾಯಕ ಕಾಮತ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30ರ ವೇಳೆಗೆ ಮೃತಪಟ್ಟಿದ್ದಾರೆ.

ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕೊಲೆ ಮಾಡುವ ಉದ್ದೇಶದಿಂದಲೇ ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು