8:05 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಪತ್ತೆ ಹಚ್ಚಿದವರು 9480803057 ನಂಬರ್ ಗೆ ಕರೆ ಮಾಡಿ

05/11/2021, 10:38

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹೊರವಲಯದ ಜಂಬಯ್ಯನ ಕರೆಯ ಬಳಿ ಸುಮಾರು 60 ವರ್ಷ ವಯಸ್ಸಿನ ಗಂಡಸಿನ ಅನಾಮಧೇಯ ಶವವೊಂದು ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಜಂಭಯ್ಯನಕೆರೆ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡ ರೀತಿಯಲ್ಲಿ ಕಂಡು ಬಂದಿದೆ. 

ಬೆಳಿಗ್ಗೆ ದಾರಿಹೋಕರು ನೀಡಿದ ಮಾಹಿತಿಯಂತೆ ಕೂಡ್ಲಿಗಿ ಪೊಲೀಸರು ಜಂಭಯ್ಯನಕೆರೆ ಬಳಿ ಹೋಗಿ ನೋಡಲಾಗಿ ಸುಮಾರು 60 ವರ್ಷದ ಗಂಡಸಿನ ಶವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ರೀತಿ ಕಂಡು ಬರುತ್ತಿದ್ದು, ಬಿಳಿ ಪಂಜೆ ಹಾಗೂ ಬಿಳಿ ಅಂಗಿ ಧರಿಸಿದ್ದು, ನಸುಕಿನ ಜಾವ ನೇಣುಹಾಕಿಕೊಂಡು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.

ಈ ಚಹರೆ ವ್ಯಕ್ತಿ ಯಾರೆಂದು ತಿಳಿದಲ್ಲಿ ತಕ್ಷಣ ಕೂಡ್ಲಿಗಿ ಪಿಎಸ್ಐ  ಮೊಬೈಲ್  9480803057 ಮತ್ತು ಸಿಬ್ಬಂದಿ ಮೊಬೈಲ್ 9964882275 ಗೆ ಮಾಹಿತಿ ನೀಡಲು ಪೊಲೀಸರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು