4:01 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಅಮ್ಮನಕೇರಿ: ಶಾಸಕ ಸಂತೋಷ ಲಾಡ್ ರಿಂದ ಗ್ರಾಮ ದೀಪೋತ್ಸವ; ಬಡವರ ಮನೆಗೆ ಸುಣ್ಣಬಣ್ಣ

05/11/2021, 13:25

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಾಜಿ ಸಚಿವ ಹಾಗೂ ಶಾಸಕ ಸಂತೋಷ ಲಾಡ್  

ಅವರು ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಡಗೂಡಿ “ಗ್ರಾಮ ದೀಪೋತ್ಸವ” ಆಚರಿಸಿದರು. 

ಅಮ್ಮನಕೇರಿ ಶ್ರೀಬಸವೇಶ್ವರ ದೇವಸ್ಥಾನ ಹಾಗೂ ಶ್ರೀಕಣವಿಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ನಂತರ ಸಂತೋಷ ಲಾಡ್ ರವರು ಕಾರ್ಯಕರ್ತರೊಂದಿಗೆ ಅಮ್ಮನಕೇರಿ ಗ್ರಾಮದ ದಲಿತ ಹಾಗೂ ಕಡು ಬಡವರ ಮನೆಗಳಿಗೆ ಬಣ್ಣ ಹಚ್ಚಿದರು. ಗ್ರಾಮದ ದೇವಸ್ಥಾನಗಳಿಗೆ ಸುಣ್ಣ ಬಣ್ಣ ಬಳಿಸಿದರು ಮತ್ತು ಗ್ರಾಮದಲ್ಲಿ, ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ದೊರಕಿಸುವಂತೆ ಸ್ಥಳೀಯ ಆಡಳಿತಕ್ಕೆ ಅವರು ತಾಕೀತು ಮಾಡಿದರು. ಅವರೊಂದಿಗೆ ಶಾಸಕ ತುಕಾರಾಂ ಹಾಗೂ  ಲೋಕೇಶ ನಾಯಕ್  ಅವರು ಸಾಥ್ ನೀಡಿದರು. ಕಾಂಗ್ರೇಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು