1:37 PM Saturday8 - August 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ…

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ಅಪಾಯದ ಮಟ್ಟಕ್ಕೇರಿದ ವಾಯು ಮಾಲಿನ್ಯ; ಹಲವರಲ್ಲಿ ಗಂಟಲು, ಕಣ್ಣು ತುರಿಕೆ

05/11/2021, 19:41

ಹೊಸದಿಲ್ಲಿ(reporterkarnataka.com): 

ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಇಂದು ಬೆಳಗ್ಗೆ ಅಪಾಯಕಾರಿ ಹಂತಕ್ಕೆ ತಲುಪಿತ್ತು. ಜನಪಥ್‌ನಲ್ಲಿ ಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು.

ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು ಗಂಟಲಿನ ತುರಿಕೆ ಮತ್ತು ಕಣ್ಣಿನಲ್ಲಿ ನೀರು ತುಂಬಿಕೊಂಡಿದೆ ಎಂದು ದೂರಿದ್ದಾರೆ.

ದೆಹಲಿಯ ಮಂಜಿನ ಪರಿಸ್ಥಿತಿಗಳು ಶುಕ್ರವಾರ ಬೆಳಿಗ್ಗೆ ತೀವ್ರಗೊಂಡಿದ್ದು, ಸಫ್ದರ್‌ಜಂಗ್ ಮತ್ತು ಪಾಲಂ ವಿಮಾನ ನಿಲ್ದಾಣಗಳಲ್ಲಿ 200 ಮೀ ನಿಂದ 500 ಮೀ ವ್ಯಾಪ್ತಿಯವರೆಗೆ ಗೋಚರತೆ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ವಿಜ್ಞಾನಿಗಳು ತಿಳಿಸಿದ್ದಾರೆ.

ದೆಹಲಿ, ಪಂಜಾಬ್‌ ಸೇರಿದಂತೆ ಪಶ್ಚಿಮ ಬಂಗಾಳ  ರಾಜಸ್ತಾನ , ಚತ್ತೀಸಘಡ ಬಿಹಾರ ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಿ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಇತರೆ ಪಟಾಕಿಗೆ ಅವಕಾಶವಿಲ್ಲ. ಈ ನಿರ್ಧಾರ ಪರ ವಿರೋಧಕ್ಕೆ ಕಾರಣಾಗಿದೆ. ಹಿಂದೂಗಳ ಹಬ್ಬಕ್ಕೆ ಮಾತ್ರ ಪಟಾಕಿ ನಿಷೇಧ ಯಾಕೆ ಅನ್ನೋ ವಾದವೂ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು