1:31 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನ.30ರ ಬಳಿಕ ಉಚಿತ ಪಡಿತರ ವಿತರಣೆ ಇಲ್ಲ; ಕೇಂದ್ರ ಸರಕಾರ ಸ್ಪಷ್ಟನೆ

06/11/2021, 13:48

ಹೊಸದಿಲ್ಲಿ(reporterkarnataka.com): ಕೊರೊನ ಲಾಕ್ಡೌನ್ ವಿತರಿಸಲಾಗುತ್ತಿದ್ದ ಉಚಿತ ಪಡಿತರ ನಿಲ್ಲಿಸಲಾಗುವುದು ಎಂದು ಕೇಂದ್ರ ಸರ್ಕಾರ  ತಿಳಿಸಿದೆ. ಸರಕಾರ ನವೆಂಬರ್ 30 ರ ಬಳಿಕ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ..  

ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯಲ್ಲಿ ದೇಶದ 80 ಕೋಟಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಆರ್ಥಿಕತೆಯಲ್ಲಿ ಚೇತರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 30ರ ನಂತರ ಉಚಿತ ಪಡಿತರವನ್ನು ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಕೋವಿಡ್-19 ನಿಂದ ಉಂಟಾದ ತೊಂದರೆ ನಿವಾರಿಸಲು PMGKAY ಅನ್ನು ಮಾರ್ಚ್ 2020 ರಲ್ಲಿ ಘೋಷಿಸಲಾಯಿತು. ಆರಂಭದಲ್ಲಿ, ಈ ಯೋಜನೆಯನ್ನು ಏಪ್ರಿಲ್-ಜೂನ್ 2020 ಅವಧಿಗೆ ಪ್ರಾರಂಭಿಸಲಾಗಿತ್ತು. ಆದರೆ ನಂತರ ಅದನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು