5:12 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ

29/05/2021, 07:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ  ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು.

ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ಬೇಸಾಯ ಹಾಗೂ ನೀರಾವರಿ ಬೇಸಾಯವನ್ನು ಕೂಡ ಮಾಡಲಾಗುತ್ತದೆ.

ರೈತರಿಗೆ ಉದ್ದು, ತೊಗರಿ, ಹೆಸರು, ಸೋಯಾಬಿನ್ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅದೇ ರೀತಿ ಗೋವಿನ ಜೋಳ ಬೀಜವನ್ನು ಕೂಡ ಮುಂದಿನ ಒಂದು ವಾರದಲ್ಲಿ ಸಂಗ್ರಹಣೆ ಮಾಡಲಾಗುವುದು.

ರೈತರಿಗೆ ಬೀಜಗಳ ವಿತರಣೆಯನ್ನು ಈ ಕೊರೊನಾ ಎಂಬ ಮಹಾಮಾರಿ ಇರುವುದರಿಂದ ಜನ ದಟ್ಟನೆ ಮಾಡಬಾರದೆಂದು ನಿಯಮ ಜಾರಿಯಲ್ಲಿರುವ ಕಾರಣ  ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದಲ್ಲಿ ಸುಮಾರು 14 ಕಡೆ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದು ಕೊಳ್ಳಬೇಕು.

ಬಿತ್ತನೆಯನ್ನು ಯಾವ ಸಮಯದಲ್ಲಿ ಯಾವ ರೀತಿ ಮಾಡಬೇಕೆಂಬುದನ್ನು ಕೂಡ ಹಂಸ ಟಿವಿ ಕನ್ನಡ ಮಾಧ್ಯಮದ ಮೂಲಕ ರೈತ ಜನರಿಗೆ ತಿಳಿಸಿದರು. 

ಬೀಜ ಪಡೆದುಕೊಳ್ಳಲು  ಆಧಾರ್ ಕಾರ್ಡ್, ಜಮೀನಿನ ಪಹಣಿ ಪತ್ರ ಅಥವಾ ಬ್ಯಾಂಕ್ ಪಾಸ್ ಬುಕ್ ಯಾವದಾರೊಂದು ದಾಖಲೆಯನ್ನು ತರಬೇಕೆಂದು  ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು