1:58 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ

29/05/2021, 07:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ  ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು.

ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ಬೇಸಾಯ ಹಾಗೂ ನೀರಾವರಿ ಬೇಸಾಯವನ್ನು ಕೂಡ ಮಾಡಲಾಗುತ್ತದೆ.

ರೈತರಿಗೆ ಉದ್ದು, ತೊಗರಿ, ಹೆಸರು, ಸೋಯಾಬಿನ್ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅದೇ ರೀತಿ ಗೋವಿನ ಜೋಳ ಬೀಜವನ್ನು ಕೂಡ ಮುಂದಿನ ಒಂದು ವಾರದಲ್ಲಿ ಸಂಗ್ರಹಣೆ ಮಾಡಲಾಗುವುದು.

ರೈತರಿಗೆ ಬೀಜಗಳ ವಿತರಣೆಯನ್ನು ಈ ಕೊರೊನಾ ಎಂಬ ಮಹಾಮಾರಿ ಇರುವುದರಿಂದ ಜನ ದಟ್ಟನೆ ಮಾಡಬಾರದೆಂದು ನಿಯಮ ಜಾರಿಯಲ್ಲಿರುವ ಕಾರಣ  ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದಲ್ಲಿ ಸುಮಾರು 14 ಕಡೆ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದು ಕೊಳ್ಳಬೇಕು.

ಬಿತ್ತನೆಯನ್ನು ಯಾವ ಸಮಯದಲ್ಲಿ ಯಾವ ರೀತಿ ಮಾಡಬೇಕೆಂಬುದನ್ನು ಕೂಡ ಹಂಸ ಟಿವಿ ಕನ್ನಡ ಮಾಧ್ಯಮದ ಮೂಲಕ ರೈತ ಜನರಿಗೆ ತಿಳಿಸಿದರು. 

ಬೀಜ ಪಡೆದುಕೊಳ್ಳಲು  ಆಧಾರ್ ಕಾರ್ಡ್, ಜಮೀನಿನ ಪಹಣಿ ಪತ್ರ ಅಥವಾ ಬ್ಯಾಂಕ್ ಪಾಸ್ ಬುಕ್ ಯಾವದಾರೊಂದು ದಾಖಲೆಯನ್ನು ತರಬೇಕೆಂದು  ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು