7:47 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಇಂದು ರಾತ್ರಿ 9ರಿಂದ ಮೇ 12ರ ವರೆಗೆ ಲಾಕ್ ಡೌನ್: ವಿಮಾನ ಹಾರಲಿದೆ, ರೈಲು ಓಡಲಿದೆ !!

27/04/2021, 04:20

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಂಗಳವಾರ(ಇಂದು) ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಆದರೆ ವಿಮಾನಗಳು ಹಾರಾಟ ನಡೆಸಲಿವೆ. ರೈಲು ಹಳಿಗಳ ಮೇಲೆ ಓಡಲಿವೆ.

ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಆರ್ಥಿಕ ಚಟುವಟಿಕೆಗಳು ಸ್ತಬ್ದಗೊಳ್ಳಲಿವೆ. ಸಿನಿಮಾ, ಶಾಪಿಂಗ್ ಮಾಲ್, ವಾಣಿಜ್ಯ ಕಟ್ಟಡ, ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು,  ಯೋಗ ಕೇಂದ್ರ, ಜಿಮ್, ಸ್ವಿಮ್ಮಿಂಗ್ ಪೂಲ್, ಪಾರ್ಕ್, ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿಷೇಧವಿದೆ. ಕೋಚಿಂಗ್ ತರಗತಿ ಬಂದ್ ಆಗಲಿದೆ. ಆನ್ ಲೈನ್ ಕೋಚಿಂಗ್ ಅಬಾಧಿತ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ನೀಡಲಾಗಿದೆ. ಆದರೆ ಕುಳಿತು ತಿನ್ನಲು ಅವಕಾಶವಿಲ್ಲ. ಮದ್ಯದಂಗಡಿಗಳಿಗೆ ಬೆಳಗ್ಗೆ 6ರಿಂದ 10ರ ವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಗಾರ್ಮೆಂಟ್ಸ್ ಹೊರತುಪಡಿಸಿ ಇತರ ಉತ್ಪಾದನಾ ವಲಯಗಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ವಿಮಾನ ಹಾರಾಟ ನಡೆಸಲಿವೆ. ರೈಲು ಓಡಲಿವೆ. ಇದರ ಪ್ರಯಾಣಿಕರಿಗೆ ಪ್ರತ್ಯೇಕ ಕ್ಯಾಬ್ ವ್ಯವಸ್ಥೆ ಮಾಡಲಾಗಿದೆ. ಮೆಟ್ರೋ ರೈಲು ಓಡಾಟ ನಿಲ್ಲಿಸಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು