4:03 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಗೋಪೂಜೆಯ ಶುಭ ದಿನದಂದು ಅಶಕ್ತ  ಕುಟುಂಬಗಳಿಗೆ ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ ‘ಗೋ ದಾನ’

06/11/2021, 16:22

ಕಾರ್ಕಳ(reporterkarnataka.com):

ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ 
ಬಜಗೋಳಿಯಲ್ಲಿ ನಡೆಯಿತು.

ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಮೂಡಿಬಂತು.

ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಜಗೋಳಿ
ಅವರು ಸ್ವಗೃಹದಲ್ಲಿ ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ ಉತ್ತಮ ತಳಿಯ, ಹೆಚ್ಚು ಹಾಲಿನ ಇಳುವರಿಯನ್ನು ಕೊಡುವ ಹಸುಗಳನ್ನು ಹಿಂದೂ ಸಾಂಪ್ರದಾಯಿಕ ವಿಧಿವಿಧಾನದ ಪ್ರಕಾರವೇ ದಾನ ಮಾಡಿದರು.

ಅನಾರೋಗ್ಯ ಪೀಡಿತರಾಗಿದ್ದ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಇದ್ದ ಮನೆಗೆ ನುಗ್ಗಿ ಮೂರು ಹಸುಗಳನ್ನು ದರೋಡೆ ಮಾಡಿದ ಕೃತ್ಯ ನಡೆದ ನಂತರ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಬದುಕು ದುಸ್ತರವಾಗಿದ್ದನ್ನು ಸುಸ್ಥಿರವಾಗಿ ಮಾಡುವ ನಿಟ್ಟಿನಲ್ಲಿ ಹಾಲು ಕೊಡುವ ಹಸು-ಕರುವನ್ನು ದಾನ ಮಾಡಲಾಯಿತು.

ದುರ್ಗ ಬೊಂಬೇದಡ್ಕ ಎಂಬಲ್ಲಿ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಗೊತ್ತಾದ ನಂತರ ಶ್ರಮಕೋರುವ ಕೆಲಸ ಮಾಡುವ ಶಿವು ಮೇರಾ ತನ್ನ ಮಡದಿ ಮತ್ತು ತನ್ನೆರಡು ಮಕ್ಕಳ ಜೀವನದ ಬಂಡಿ ಸಾಗಿಸೋದು ಹೇಗೇ ಎಂಬ ಚಿಂತೆಯಲ್ಲಿರುವಾಗಲೇ ರವೀಂದ್ರ ಶೆಟ್ಟರು ಮಾಡಿದ ಗೋ ದಾನವು ಅವರ ಮೊಗದಲ್ಲೂ ಸಂತಸದ ಕಳೆ ಮೂಡಿಸಿತು.


ಪೆರ್ವಾಜೆ ದೇವರಗುಡ್ಡೆ ಎಂಬಲ್ಲಿ ತನ್ನ ಇಳಿವಯಸ್ಸಿನಲ್ಲೂ ಬೀಡಿ ಕಟ್ಟಿ ತನ್ನ ಸಂಸಾರದ ನೌಕೆ ಸಾಗಿಸುತ್ತಿದ್ದ ಜಯಂತಿ ಮೊಗೇರ ಎಂಬ ಮಹಿಳೆಗೆ ರವೀಂದ್ರ ಶೆಟ್ರು ನೀಡಿದ ಗೋ ದಾನವು ಆಕೆಯ ಬದುಕಿಗೆ ಭದ್ರತೆಯ ಭರವಸೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು