6:41 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಗೋಪೂಜೆಯ ಶುಭ ದಿನದಂದು ಅಶಕ್ತ  ಕುಟುಂಬಗಳಿಗೆ ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ ‘ಗೋ ದಾನ’

06/11/2021, 16:22

ಕಾರ್ಕಳ(reporterkarnataka.com):

ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ 
ಬಜಗೋಳಿಯಲ್ಲಿ ನಡೆಯಿತು.

ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಮೂಡಿಬಂತು.

ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಜಗೋಳಿ
ಅವರು ಸ್ವಗೃಹದಲ್ಲಿ ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ ಉತ್ತಮ ತಳಿಯ, ಹೆಚ್ಚು ಹಾಲಿನ ಇಳುವರಿಯನ್ನು ಕೊಡುವ ಹಸುಗಳನ್ನು ಹಿಂದೂ ಸಾಂಪ್ರದಾಯಿಕ ವಿಧಿವಿಧಾನದ ಪ್ರಕಾರವೇ ದಾನ ಮಾಡಿದರು.

ಅನಾರೋಗ್ಯ ಪೀಡಿತರಾಗಿದ್ದ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಇದ್ದ ಮನೆಗೆ ನುಗ್ಗಿ ಮೂರು ಹಸುಗಳನ್ನು ದರೋಡೆ ಮಾಡಿದ ಕೃತ್ಯ ನಡೆದ ನಂತರ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಬದುಕು ದುಸ್ತರವಾಗಿದ್ದನ್ನು ಸುಸ್ಥಿರವಾಗಿ ಮಾಡುವ ನಿಟ್ಟಿನಲ್ಲಿ ಹಾಲು ಕೊಡುವ ಹಸು-ಕರುವನ್ನು ದಾನ ಮಾಡಲಾಯಿತು.

ದುರ್ಗ ಬೊಂಬೇದಡ್ಕ ಎಂಬಲ್ಲಿ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಗೊತ್ತಾದ ನಂತರ ಶ್ರಮಕೋರುವ ಕೆಲಸ ಮಾಡುವ ಶಿವು ಮೇರಾ ತನ್ನ ಮಡದಿ ಮತ್ತು ತನ್ನೆರಡು ಮಕ್ಕಳ ಜೀವನದ ಬಂಡಿ ಸಾಗಿಸೋದು ಹೇಗೇ ಎಂಬ ಚಿಂತೆಯಲ್ಲಿರುವಾಗಲೇ ರವೀಂದ್ರ ಶೆಟ್ಟರು ಮಾಡಿದ ಗೋ ದಾನವು ಅವರ ಮೊಗದಲ್ಲೂ ಸಂತಸದ ಕಳೆ ಮೂಡಿಸಿತು.


ಪೆರ್ವಾಜೆ ದೇವರಗುಡ್ಡೆ ಎಂಬಲ್ಲಿ ತನ್ನ ಇಳಿವಯಸ್ಸಿನಲ್ಲೂ ಬೀಡಿ ಕಟ್ಟಿ ತನ್ನ ಸಂಸಾರದ ನೌಕೆ ಸಾಗಿಸುತ್ತಿದ್ದ ಜಯಂತಿ ಮೊಗೇರ ಎಂಬ ಮಹಿಳೆಗೆ ರವೀಂದ್ರ ಶೆಟ್ರು ನೀಡಿದ ಗೋ ದಾನವು ಆಕೆಯ ಬದುಕಿಗೆ ಭದ್ರತೆಯ ಭರವಸೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು