11:26 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಗೋಪೂಜೆಯ ಶುಭ ದಿನದಂದು ಅಶಕ್ತ  ಕುಟುಂಬಗಳಿಗೆ ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ ‘ಗೋ ದಾನ’

06/11/2021, 16:22

ಕಾರ್ಕಳ(reporterkarnataka.com):

ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ 
ಬಜಗೋಳಿಯಲ್ಲಿ ನಡೆಯಿತು.

ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಮೂಡಿಬಂತು.

ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಜಗೋಳಿ
ಅವರು ಸ್ವಗೃಹದಲ್ಲಿ ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ ಉತ್ತಮ ತಳಿಯ, ಹೆಚ್ಚು ಹಾಲಿನ ಇಳುವರಿಯನ್ನು ಕೊಡುವ ಹಸುಗಳನ್ನು ಹಿಂದೂ ಸಾಂಪ್ರದಾಯಿಕ ವಿಧಿವಿಧಾನದ ಪ್ರಕಾರವೇ ದಾನ ಮಾಡಿದರು.

ಅನಾರೋಗ್ಯ ಪೀಡಿತರಾಗಿದ್ದ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಇದ್ದ ಮನೆಗೆ ನುಗ್ಗಿ ಮೂರು ಹಸುಗಳನ್ನು ದರೋಡೆ ಮಾಡಿದ ಕೃತ್ಯ ನಡೆದ ನಂತರ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಬದುಕು ದುಸ್ತರವಾಗಿದ್ದನ್ನು ಸುಸ್ಥಿರವಾಗಿ ಮಾಡುವ ನಿಟ್ಟಿನಲ್ಲಿ ಹಾಲು ಕೊಡುವ ಹಸು-ಕರುವನ್ನು ದಾನ ಮಾಡಲಾಯಿತು.

ದುರ್ಗ ಬೊಂಬೇದಡ್ಕ ಎಂಬಲ್ಲಿ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಗೊತ್ತಾದ ನಂತರ ಶ್ರಮಕೋರುವ ಕೆಲಸ ಮಾಡುವ ಶಿವು ಮೇರಾ ತನ್ನ ಮಡದಿ ಮತ್ತು ತನ್ನೆರಡು ಮಕ್ಕಳ ಜೀವನದ ಬಂಡಿ ಸಾಗಿಸೋದು ಹೇಗೇ ಎಂಬ ಚಿಂತೆಯಲ್ಲಿರುವಾಗಲೇ ರವೀಂದ್ರ ಶೆಟ್ಟರು ಮಾಡಿದ ಗೋ ದಾನವು ಅವರ ಮೊಗದಲ್ಲೂ ಸಂತಸದ ಕಳೆ ಮೂಡಿಸಿತು.


ಪೆರ್ವಾಜೆ ದೇವರಗುಡ್ಡೆ ಎಂಬಲ್ಲಿ ತನ್ನ ಇಳಿವಯಸ್ಸಿನಲ್ಲೂ ಬೀಡಿ ಕಟ್ಟಿ ತನ್ನ ಸಂಸಾರದ ನೌಕೆ ಸಾಗಿಸುತ್ತಿದ್ದ ಜಯಂತಿ ಮೊಗೇರ ಎಂಬ ಮಹಿಳೆಗೆ ರವೀಂದ್ರ ಶೆಟ್ರು ನೀಡಿದ ಗೋ ದಾನವು ಆಕೆಯ ಬದುಕಿಗೆ ಭದ್ರತೆಯ ಭರವಸೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು