1:35 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗೋಪೂಜೆಯ ಶುಭ ದಿನದಂದು ಅಶಕ್ತ  ಕುಟುಂಬಗಳಿಗೆ ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ ‘ಗೋ ದಾನ’

06/11/2021, 16:22

ಕಾರ್ಕಳ(reporterkarnataka.com):

ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ 
ಬಜಗೋಳಿಯಲ್ಲಿ ನಡೆಯಿತು.

ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಮೂಡಿಬಂತು.

ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಜಗೋಳಿ
ಅವರು ಸ್ವಗೃಹದಲ್ಲಿ ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ ಉತ್ತಮ ತಳಿಯ, ಹೆಚ್ಚು ಹಾಲಿನ ಇಳುವರಿಯನ್ನು ಕೊಡುವ ಹಸುಗಳನ್ನು ಹಿಂದೂ ಸಾಂಪ್ರದಾಯಿಕ ವಿಧಿವಿಧಾನದ ಪ್ರಕಾರವೇ ದಾನ ಮಾಡಿದರು.

ಅನಾರೋಗ್ಯ ಪೀಡಿತರಾಗಿದ್ದ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಇದ್ದ ಮನೆಗೆ ನುಗ್ಗಿ ಮೂರು ಹಸುಗಳನ್ನು ದರೋಡೆ ಮಾಡಿದ ಕೃತ್ಯ ನಡೆದ ನಂತರ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಬದುಕು ದುಸ್ತರವಾಗಿದ್ದನ್ನು ಸುಸ್ಥಿರವಾಗಿ ಮಾಡುವ ನಿಟ್ಟಿನಲ್ಲಿ ಹಾಲು ಕೊಡುವ ಹಸು-ಕರುವನ್ನು ದಾನ ಮಾಡಲಾಯಿತು.

ದುರ್ಗ ಬೊಂಬೇದಡ್ಕ ಎಂಬಲ್ಲಿ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಗೊತ್ತಾದ ನಂತರ ಶ್ರಮಕೋರುವ ಕೆಲಸ ಮಾಡುವ ಶಿವು ಮೇರಾ ತನ್ನ ಮಡದಿ ಮತ್ತು ತನ್ನೆರಡು ಮಕ್ಕಳ ಜೀವನದ ಬಂಡಿ ಸಾಗಿಸೋದು ಹೇಗೇ ಎಂಬ ಚಿಂತೆಯಲ್ಲಿರುವಾಗಲೇ ರವೀಂದ್ರ ಶೆಟ್ಟರು ಮಾಡಿದ ಗೋ ದಾನವು ಅವರ ಮೊಗದಲ್ಲೂ ಸಂತಸದ ಕಳೆ ಮೂಡಿಸಿತು.


ಪೆರ್ವಾಜೆ ದೇವರಗುಡ್ಡೆ ಎಂಬಲ್ಲಿ ತನ್ನ ಇಳಿವಯಸ್ಸಿನಲ್ಲೂ ಬೀಡಿ ಕಟ್ಟಿ ತನ್ನ ಸಂಸಾರದ ನೌಕೆ ಸಾಗಿಸುತ್ತಿದ್ದ ಜಯಂತಿ ಮೊಗೇರ ಎಂಬ ಮಹಿಳೆಗೆ ರವೀಂದ್ರ ಶೆಟ್ರು ನೀಡಿದ ಗೋ ದಾನವು ಆಕೆಯ ಬದುಕಿಗೆ ಭದ್ರತೆಯ ಭರವಸೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು