1:07 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ

06/11/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಕಾರ್ಖಾನೆಯಿಂದ ಕಬ್ಬು ಖಾಲಿ ಮಾಡಿ ಅನಂತಪುರ ಮಾರ್ಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂದಿನ ಟ್ರೇಲರ್ ಜೋಡನೆ ಪಿನ್ ಸ್ಲಿಪ್ಆಗಿ ಟ್ರೇಲರ್ ಪಲ್ಟಿ ಆಗಿದೆ. ಟ್ರೇಲರ್ ಪಕ್ಕದಲ್ಲೆ ತಾಂವಶಿ ಮಾರ್ಗವಾಗಿ ಹೊರಟಿದ್ದ ದ್ವಿಚಕ್ರ ವಾಹನ ಮೇಲೆ ಟ್ರೇಲರ್ ಪಲ್ಟಿಯಾಗಿದೆ.


ದ್ವಿಚಕ್ರ ವಾಹನದ ಮೇಲಿದ್ದ ಇಬ್ಬರ ಪೈಕಿ ಒಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಅಥಣಿ ತಾಲೂಕಿನ ಮಧಭಾವಿ ಗ್ರಾಮದ ಸಚಿನ ರಾಯಪ್ಪ ನಿವಲಗಿ (25) ಮೃತಪಟ್ಟ ದುರ್ದೈವಿ.

ಅಪಘಾತ ಸಂಭವಿಸಿದ ಸ್ಥಳದಿಂದ ಸ್ಥಳೀಯರು 108 ಸಹಾಯವಾಣಿಗೆ ಕರೆ ಮಾಡಿದ್ದಾರೆ.

ಸರ್ಕಾರಿ 108 ತುರ್ತು ಸೇವೆ ಆಂಬುಲೆನ್ಸ್ ಅಪಘಾತ ಸ್ಥಳಕ್ಕೆ ತಲುಪಲು ಒಂದು ತಾಸಿಗೂ ಹೆಚ್ಚು ಸಮಯ ತಗೆದುಕೊಂಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಧ್ಯಮ ಜತೆ ಮಾತನಾಡಿದ ಸ್ಥಳೀಯರು ಸಂಪೂರ್ಣ ಹದಗೆಟ್ಟು ಹೋಗಿರುವ ರಸ್ತೆ ಹಾಗೂ ಅತಿ ವೇಗದಲ್ಲಿ ಚಲಿಸುತ್ತಿರುವ ಕಬ್ಬಿಣ ಟ್ರ್ಯಾಕ್ಟರಗಳು ತಗ್ಗು ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳು ಅಮಾಯಕರನ್ನು ಬಲಿ ಪಡೆಯುತ್ತಿವೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು