3:57 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್  ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ

29/05/2021, 07:39

ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ ನಮ್ಮ ಅಪ್ಪಟ ಕನ್ನಡತಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಶಿಲ್ಪಾ ಪ್ರಭಾಕರ್ ಅವರೇ ವಿಶೇಷ ಅಧಿಕಾರಿ. ಇವರು ನಿವೃತ್ತ ಪೊಲೀಸ್ ಅಧಿಕಾರಿ ಪ್ರಭಾಕರ್​ ಅವರ ಪುತ್ರಿ.

1981 ಆಗಸ್ಟ್ 31 ಗೌರಿಬಿದನೂರು ನಗರದಲ್ಲಿ ಜನಿಸಿದ ಶಿಲ್ಪಾ, ಪ್ರಾಥಮಿಕ ಹಾಗೂ ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್ ಕಾಲೇಜ್​ನಲ್ಲಿ ಪೂರೈಸಿದರು. ಬೆಂಗಳೂರಿನಲ್ಲಿ ಎಲ್ ಎಲ್ ಬಿ ಪದವಿ ಪಡೆದರು.  ನಂತರ ಯುಪಿಎಸ್ ಸಿ ಪರೀಕ್ಷೆಗೆ ಕುಳಿತರು. ಅಲ್ಲಿ 46ನೇ ಸ್ಥಾನದೊಂದಿಗೆ ಉತ್ತೀರ್ಣರಾಗಿದ್ದರು. 2018ರಲ್ಲಿ ತಮಿಳುನಾಡಿನ ತಿರುವನ್ವೇಲಿ ಜಿಲ್ಲೆಯ ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ನೇಮಕಗೊಂಡರು. ಅಂಗನವಾಡಿ ಕೇಂದ್ರಗಳನ್ನು ದೇಶದಲ್ಲಿಯೇ ಮಾದರಿ ಅಂಗನವಾಡಿ ಮಾಡಲು ನಿರ್ಧರಿಸಿ ತಮ್ಮ ಮೂರು ವರ್ಷದ ಹೆಣ್ಣುಮಗುವನ್ನು ಅಂಗನವಾಡಿಗೆ ಸೇರಿಸುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದರು. ಶಿಲ್ಪಾ ಅವರು ಮುಂದೆ ಎಂದೂ ತನ್ನ ವೃತ್ತಿ ಜೀವನದಲ್ಲಿ ಹಿಂತಿರುಗಿ ನೋಡಿಲ್ಲ. ಇದೀಗ ತಮಿಳುನಾಡು ಸಿಎಂ ನ ವಿಶೇಷ ಅಧಿಕಾರಿ.

ಇತ್ತೀಚಿನ ಸುದ್ದಿ

ಜಾಹೀರಾತು