5:34 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಇಂಧನ ಬೆಲೆ ಇಳಿಕೆ ಸಂತಸ ತಂದಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ: ಶಾಸಕ ವೇದವ್ಯಾಸ ಕಾಮತ್

07/11/2021, 13:34

ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಇಂಧನ ಮೇಲಿನ ಬೆಲೆ ಇಳಿಕೆ ಮಾಡಿದ ಕ್ರಮ ಶ್ಲಾಾಘನೀಯವಾಗಿದ್ದು, ಇದು ದೀಪಾವಳಿ ವೇಳೆಗೆ ಕೊಡುಗೆಯಾಗಿದೆ. ಇದರಿಂದ ಎಲ್ಲ ಜನತೆಗೆ ಪ್ರಯೋಜನ ಲಭಿಸಿದಂತಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ರಾಜಕೀಯ ಇಲ್ಲ ಎಂದು ಶಾಸಕ ವೇದವ್ಯಾಾಸ ಕಾಮತ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿವಾರ್ಯ ಕಾರಣಗಳಿಂದ ಇಂಧನ ಬೆಲೆ ಏರಿಕೆಯಾಗಿತ್ತು. ಇದೀಗ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಇದರಿಂದಾಗಿ ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದನ್ನು ಬೇರೆಯೇ ರೀತಿಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿನಾ ಕಾರಣ ಟೀಕಿಸುತ್ತಿವೆ. ಇಂಧನ ಬೆಲೆ ಇಳಿಕೆಗೂ ದೇಶದಲ್ಲಿ ನಡೆದ ಉಪಚುನಾವಣೆ ಫಲಿತಾಂಶಗಳಿಗೂ ಯಾವುದೇ ಸಂಬಂಧ ಇಲ್ಲ. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು
ಹಾಗೂ ಜನತೆಯಲ್ಲಿ ತಪ್ಪು ಅಭಿಪ್ರಾಾಯ ಮೂಡಿಸಲು ಕಾಂಗ್ರೆಸ್ ಹಾಗೂ ವಿಪಕ್ಷಗಳು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿವೆ. 

ಇದಕ್ಕೆ ಜನತೆ ಕಿವಿಗೊಡಬೇಕಾಗಿಲ್ಲ ಎಂದು ವೇದವ್ಯಾಾಸ ಕಾಮತ್ ವಿನಂತಿಸಿದ್ದಾಾರೆ.

ಇತ್ತೀಚಿನ ಸುದ್ದಿ

ಜಾಹೀರಾತು