8:58 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಇಂಧನ ಬೆಲೆ ಇಳಿಕೆ ಸಂತಸ ತಂದಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ: ಶಾಸಕ ವೇದವ್ಯಾಸ ಕಾಮತ್

07/11/2021, 13:34

ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಇಂಧನ ಮೇಲಿನ ಬೆಲೆ ಇಳಿಕೆ ಮಾಡಿದ ಕ್ರಮ ಶ್ಲಾಾಘನೀಯವಾಗಿದ್ದು, ಇದು ದೀಪಾವಳಿ ವೇಳೆಗೆ ಕೊಡುಗೆಯಾಗಿದೆ. ಇದರಿಂದ ಎಲ್ಲ ಜನತೆಗೆ ಪ್ರಯೋಜನ ಲಭಿಸಿದಂತಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ರಾಜಕೀಯ ಇಲ್ಲ ಎಂದು ಶಾಸಕ ವೇದವ್ಯಾಾಸ ಕಾಮತ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿವಾರ್ಯ ಕಾರಣಗಳಿಂದ ಇಂಧನ ಬೆಲೆ ಏರಿಕೆಯಾಗಿತ್ತು. ಇದೀಗ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಇದರಿಂದಾಗಿ ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದನ್ನು ಬೇರೆಯೇ ರೀತಿಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿನಾ ಕಾರಣ ಟೀಕಿಸುತ್ತಿವೆ. ಇಂಧನ ಬೆಲೆ ಇಳಿಕೆಗೂ ದೇಶದಲ್ಲಿ ನಡೆದ ಉಪಚುನಾವಣೆ ಫಲಿತಾಂಶಗಳಿಗೂ ಯಾವುದೇ ಸಂಬಂಧ ಇಲ್ಲ. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು
ಹಾಗೂ ಜನತೆಯಲ್ಲಿ ತಪ್ಪು ಅಭಿಪ್ರಾಾಯ ಮೂಡಿಸಲು ಕಾಂಗ್ರೆಸ್ ಹಾಗೂ ವಿಪಕ್ಷಗಳು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿವೆ. 

ಇದಕ್ಕೆ ಜನತೆ ಕಿವಿಗೊಡಬೇಕಾಗಿಲ್ಲ ಎಂದು ವೇದವ್ಯಾಾಸ ಕಾಮತ್ ವಿನಂತಿಸಿದ್ದಾಾರೆ.

ಇತ್ತೀಚಿನ ಸುದ್ದಿ

ಜಾಹೀರಾತು