5:37 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಹರೇಕಳದಿಂದ ಹೊಸದಿಲ್ಲಿಗೆ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದೆಹಲಿ ವಿಮಾನವೇರಿದ ಅಕ್ಷರ ಸಂತ ಹರೇಕಳ ಹಾಜಬ್ಬ

07/11/2021, 19:20

ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದರು. ಮಂಗಳೂರು ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ದೇಶದ ರಾಜಧಾನಿಗೆ ತೆರಳಿದರು. 

ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈಯಲ್ಲೊಂದು ಕಪ್ಪು ಬ್ಯಾಗ್ ಹಿಡಿದುಕೊಂಡು ಅವರು ವಿಮಾನ ಏರಿದರು.

ಕಿತ್ತಲೆ ಮಾರಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ದೊಡ್ಡ ಹೆಸರು. ತಾನು ಅಕ್ಷರ ಕಲಿಯದಿದ್ದರೂ ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದೆಂದು ಭಗೀರಥ ಪ್ರಯತ್ನಪಟ್ಟು ತನ್ನೂರಿಗೆ ಸರಕಾರಿ ಶಾಲೆಯನ್ನು ತರಿಸಿದ್ದರು. ಅವರ ಪ್ರಯತ್ನದ ಫಲವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆಯಾಗಿ ರೂಪುಗೊಂಡಿದೆ.

ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನಾಳೆ ಅವರಿಗೆ ರಾಷ್ಟಪತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಯ ವಿಮಾನ ಏರಿದ ಅಕ್ಷರ ಸಂತನಿಗೆ ರಿಪೋರ್ಟರ್ ಕರ್ನಾಟಕದ ಶುಭ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು