2:08 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಇಳಂತಿಲ ಬಳಿ ಪತ್ತೆಯಾದ ಗ್ರೆನೇಡ್ 40 ವರ್ಷ ಹಳೆಯದ್ದೇ?: ತನಿಖೆ ಆರಂಭ

08/11/2021, 09:18

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಪತ್ತೆಯಾಗಿ ಭಾರಿ ಆತಂಕ ಸೃಷ್ಟಿಸಿದ ಐದು ಗ್ರೆನೇಡ್‌ಗಳು ಸುಮಾರು 40 ವರ್ಷ ಹಳೆಯದ್ದು ಎಂದು ತಿಳಿದು ಬಂದಿದೆ.

ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಗ್ರೆನೇಡ್‌ಗಳು ಪತ್ತೆಯಾಗಿವೆ. ಪ್ಲಾಸ್ಟಿಕ್ ಕವರ್‌ನಲ್ಲಿ ಒಂದು ಗ್ರೆನೇಡ್ ಹಾಗೂ ಉಳಿದ ನಾಲ್ಕು ಗ್ರೆನೇಡ್‌ಗಳು ನೆಲದ ಮೇಲೆ ಬಿದ್ದಿದ್ದವು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಅವುಗಳನ್ನು ಸುರಕ್ಷಿತವಾಗಿ ತಮ್ಮ ನಿವಾಸಕ್ಕೆ ತೆಗೆದುಕೊಂಡು ಹೋದ ಜಯಕುಮಾರ್ ಪೂಜಾರಿ ಅವರು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ದಕ್ಷಿಣ ಕನ್ನಡ ಪೊಲೀಸರು ಗ್ರೆನೇಡ್ ವಶಪಡಿಸಿಕೊಂಡಿದ್ದಾರೆ. ಗ್ರೆನೇಡ್‌ಗಳು ಸುಮಾರು 40 ವರ್ಷಗಳಷ್ಟು ಹಳೆಯದಾಗಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು