6:34 PM Wednesday16 - July 2025
ಬ್ರೇಕಿಂಗ್ ನ್ಯೂಸ್
Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಇಳಂತಿಲ ಬಳಿ ಪತ್ತೆಯಾದ ಗ್ರೆನೇಡ್ 40 ವರ್ಷ ಹಳೆಯದ್ದೇ?: ತನಿಖೆ ಆರಂಭ

08/11/2021, 09:18

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಪತ್ತೆಯಾಗಿ ಭಾರಿ ಆತಂಕ ಸೃಷ್ಟಿಸಿದ ಐದು ಗ್ರೆನೇಡ್‌ಗಳು ಸುಮಾರು 40 ವರ್ಷ ಹಳೆಯದ್ದು ಎಂದು ತಿಳಿದು ಬಂದಿದೆ.

ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಗ್ರೆನೇಡ್‌ಗಳು ಪತ್ತೆಯಾಗಿವೆ. ಪ್ಲಾಸ್ಟಿಕ್ ಕವರ್‌ನಲ್ಲಿ ಒಂದು ಗ್ರೆನೇಡ್ ಹಾಗೂ ಉಳಿದ ನಾಲ್ಕು ಗ್ರೆನೇಡ್‌ಗಳು ನೆಲದ ಮೇಲೆ ಬಿದ್ದಿದ್ದವು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಅವುಗಳನ್ನು ಸುರಕ್ಷಿತವಾಗಿ ತಮ್ಮ ನಿವಾಸಕ್ಕೆ ತೆಗೆದುಕೊಂಡು ಹೋದ ಜಯಕುಮಾರ್ ಪೂಜಾರಿ ಅವರು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ದಕ್ಷಿಣ ಕನ್ನಡ ಪೊಲೀಸರು ಗ್ರೆನೇಡ್ ವಶಪಡಿಸಿಕೊಂಡಿದ್ದಾರೆ. ಗ್ರೆನೇಡ್‌ಗಳು ಸುಮಾರು 40 ವರ್ಷಗಳಷ್ಟು ಹಳೆಯದಾಗಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು