8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಇಳಂತಿಲ ಬಳಿ ಪತ್ತೆಯಾದ ಗ್ರೆನೇಡ್ 40 ವರ್ಷ ಹಳೆಯದ್ದೇ?: ತನಿಖೆ ಆರಂಭ

08/11/2021, 09:18

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಪತ್ತೆಯಾಗಿ ಭಾರಿ ಆತಂಕ ಸೃಷ್ಟಿಸಿದ ಐದು ಗ್ರೆನೇಡ್‌ಗಳು ಸುಮಾರು 40 ವರ್ಷ ಹಳೆಯದ್ದು ಎಂದು ತಿಳಿದು ಬಂದಿದೆ.

ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಗ್ರೆನೇಡ್‌ಗಳು ಪತ್ತೆಯಾಗಿವೆ. ಪ್ಲಾಸ್ಟಿಕ್ ಕವರ್‌ನಲ್ಲಿ ಒಂದು ಗ್ರೆನೇಡ್ ಹಾಗೂ ಉಳಿದ ನಾಲ್ಕು ಗ್ರೆನೇಡ್‌ಗಳು ನೆಲದ ಮೇಲೆ ಬಿದ್ದಿದ್ದವು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಅವುಗಳನ್ನು ಸುರಕ್ಷಿತವಾಗಿ ತಮ್ಮ ನಿವಾಸಕ್ಕೆ ತೆಗೆದುಕೊಂಡು ಹೋದ ಜಯಕುಮಾರ್ ಪೂಜಾರಿ ಅವರು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ದಕ್ಷಿಣ ಕನ್ನಡ ಪೊಲೀಸರು ಗ್ರೆನೇಡ್ ವಶಪಡಿಸಿಕೊಂಡಿದ್ದಾರೆ. ಗ್ರೆನೇಡ್‌ಗಳು ಸುಮಾರು 40 ವರ್ಷಗಳಷ್ಟು ಹಳೆಯದಾಗಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು