1:36 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಅಂಗನವಾಡಿ, LKG,  UKG ಇಂದಿನಿಂದ ಓಪನ್ : ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ? ಪೂರ್ತಿ ವಿವರ ಓದಿ ನೋಡಿ

08/11/2021, 09:24

ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು.

ರಾಜ್ಯ ಸರ್ಕಾರವು ಪತ್ರದಲ್ಲಿ ಶೇ.2ಕ್ಕಿಂತ ಕಡಿಮೆ ಟಿಪಿಆರ್ ಇರುವ ತಾಲ್ಲೂಕುಗಳಲ್ಲಿ ಕೋವಿಡ್-19 ( Covid19 ) ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವ ಹಾಗೂ ಲಸಿಕೆ ಪಡೆದಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮೂಲಕ ಸೇವೆಗಳನ್ನು ಒದಗಿಸಲು 2 ಗಂಟೆಗಳ ಕಾಲ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿರುತ್ತದೆ.

ಅಂಗನವಾಡಿ ಕೇಂದ್ರಗಳನ್ನು ( ಪುನರ್ ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು ಇಂತಿವೆ:

* ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು.

* ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸುವುದು

* ಅಂಗವಾಡಿ ಕೇಂದ್ರಗಳಲ್ಲಿನ ಪಾಕೋಪಕರಣ, ಮಕ್ಕಳು ಕುಳಿತುಕೊಳ್ಳಲು ಉಪಯೋಗಿಸಿದ ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಶುಚಿಗೊಳಿಸುವುದು.

* ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಚಗೊಳಿಸುವುದು.

* ಪೌಷ್ಟಿಕ ಆಹಾರ ತಯಾರಿಸುವ ಎಲ್ಲಾ ಪಾತ್ರೆ, ಲೋಟ, ಕುಕ್ಕರ್ ಶುಚಿಗೊಳಿಸುವುದು.

* ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡುವುದು.

* ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಚಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯು ಪಡೆಯುವುದು

* ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.

*ಕೋವಿಡ್ ಪಾಸಿಟಿವಿಟಿ ದರ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾಂಭಿಸುವುದು.

* ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದು.

*ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು

ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಾಲೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ, ಈ ಕೆಳಕಂಡ ಕ್ರಮವಹಿಸಲು ಸೂಚಿಸಿದೆ.

ದಿನಾಂಕ 08-11-2021ರಿಂದ ಅರ್ಧ ದಿನ ಎಲ್ಲಾ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವುದು.

ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಸದರಿ ತರಗತಿಗಳನ್ನು ಭೌತಿಕವಾಗಿ ಪ್ರಾರಂಭಿಸುವುದು.

ಶಾಲೆ ಪ್ರಾರಂಭಕ್ಕೂ ಮುನ್ನಾ ಸೋಂಕು ನಿವಾರಕ ದ್ರಾವಣಗಳಿಂದ ಶುದ್ಧೀಕರಿಸುವುದು, ಸ್ಯಾನಿಟೈಸ್ ಮಾಡುವುದು.

ಶಾಲೆಗಳಲ್ಲಿ ಹಾಜರಾಗುವ ಎಲ್ ಕೆ ಜೆ ಮತ್ತು ಯುಕೆಜಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.

ಶಾಲೆಗೆ ಹಾಜರಾಗುವ ಎಲ್ಲಾ ಶಿಕ್ಷಕರು, ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು.

ಶಿಕ್ಷಕರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.

ಮಕ್ಕಳಿಗೆ ಮನೆಯಿಂದಲೇ ಉಪಹಾರ, ಕುಡಿಯುವ ಶುದ್ಧನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು.

ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡುವುದು.

ಇತ್ತೀಚಿನ ಸುದ್ದಿ

ಜಾಹೀರಾತು