4:06 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ತುಳುನಾಡಿನ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರದಾನ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ

08/11/2021, 12:14

ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಇಂದು ಪ್ರದಾನ ಮಾಡಿದರು.

ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

ಹಾಜಬ್ಬ ಅವರು ಭಾನುವಾರ ದೆಹಲಿ ಪ್ರಯಾಣ ನಡೆಸಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಸ್ಪೈಸ್ ಜೆಟ್ ವಿಮಾನದಲ್ಲಿ ಮುಂಬಯಿ ಮೂಲಕ ಅವರು ದೇಶದ ರಾಜಧಾನಿ ತಲುಪಿದ್ದರು.

ಎಂದಿನಂತೆ ಮೊಣ ಕಾಲಿನಿಂದ ಮೇಲೆ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಕೈಯಲ್ಲೊಂದು ಕಪ್ಪು ಬ್ಯಾಗ್ ಹಿಡಿದುಕೊಂಡು ಅವರು ವಿಮಾನ ಏರಿದರು. ಇದೀಗ ರಾಷ್ಟ್ರಪತಿಭವಕ್ಕೂ ಅದೇ ರೀತಿಯ ಮಾಸಿದ ಬಿಳಿ ಪಂಚೆ ಮತ್ತೆ ಬಿಳಿ ಶರ್ಟ್ ತೊಟ್ಟು ಕೈಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಿಡಿದುಕೊಂಡು ತೆರಳಿದ್ದರು.

ಕಿತ್ತಲೆ ಮಾರಿ ಜೀವನ ಸಾಗಿಸುತ್ತಿದ್ದ ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲೇ ದೊಡ್ಡ ಹೆಸರು. ತಾನು ಅಕ್ಷರ ಕಲಿಯದಿದ್ದರೂ ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದೆಂದು ಭಗೀರಥ ಪ್ರಯತ್ನಪಟ್ಟು ತನ್ನೂರಿಗೆ ಸರಕಾರಿ ಶಾಲೆಯನ್ನು ತರಿಸಿದ್ದರು. ಅವರ ಪ್ರಯತ್ನದ ಫಲವಾಗಿ ಪ್ರಾಥಮಿಕ ಶಾಲೆ ಪ್ರೌಢಶಾಲೆಯಾಗಿ ರೂಪುಗೊಂಡಿದೆ.

ಅಕ್ಷರ ಸಂತನಿಗೆ ರಿಪೋರ್ಟರ್ ಕರ್ನಾಟಕದ ಶುಭ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು