7:48 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮನೆ ಮನೆಗೆ ನಾಳೆಯಿಂದ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

09/11/2021, 10:16

ಮಂಗಳೂರು(reporterkarnataka.com ): ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್  10ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. 

ಅವರು ಮಂಗಳೂರು ಮಹಾನಗರ ಪಾಲಿಕೆಯ ಕೋವಿಡ್ ವಾರ್ ರೂಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಈ ಅಭಿಯಾನಕ್ಕೆ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಕೈಜೋಡಿಸಿರುವ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟಿçÃಯ ಸ್ವಯಂ ಸೇವಾ ಯೋಜನೆಯ ಸ್ವಯಂ ಸೇವಕರು, ಎರಡನೇ ಡೋಸ್ ಲಸಿಕೆ ಪಡೆಯದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಲಸಿಕೆಯ ಮಹತ್ವ ತಿಳಿಸಿಕೊಟ್ಟು, ಜಾಗೃತಿ ಮೂಡಿಸಿ, ಲಸಿಕೆ ಪಡೆಯುವಂತೆ ಮನನ ಮಾಡಲಿದ್ದಾರೆ, ಆ ಮೂಲಕ  ಜಿಲ್ಲೆಯನ್ನು ಸಂಪೂರ್ಣ ಕೋವಿಡ್ ಲಸಿಕಾ ಜಿಲ್ಲೆಯನ್ನಾಗಿಸಲಾಗವುದು ಎಂದು ಹೇಳಿದರು. ಮೊದಲ ಹಂತದಲ್ಲಿ ಮನೆ ಮನೆಗೆ ಲಸಿಕಾ ಮಿತ್ರ ಅಭಿಯಾನಕ್ಕೆ ಇದೇ ನ.10ರಂದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಾಲನೆ ನೀಡಲಾಗುವುದು, ಮುಂದಿನ ಹಂತದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಆರಂಭವಾಗಲಿದೆ, ಈ ಅಭಿಯಾನದಲ್ಲಿ ಭಾಗವಹಿಸುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ತರಬೇತಿಯನ್ನು ಸಹ ನೀಡಲಾಗುವುದು ಎಂದು ತಿಳಿಸಿದರು. 

ಈ ಹಿನ್ನಲೆಯಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಯಶಸ್ವಿಗೆ ಕೈಜೋಡಿಸುವಂತೆ ಡಿಎಚ್‌ಒ ಕೋರಿದರು.  



ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ. ಅಶೋಕ್ ಕುಮಾರ್, ಮಂಗಳೂರು  ಮಹಾನಗರ ಪಾಲಿಕೆಯ ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ. ಅಣ್ಣಯ್ಯ ಕುಲಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಮಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಹಾಗೂ ನಗರ ವ್ಯಾಪ್ತಿಯ ಎಲ್ಲಾ ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು