8:52 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಬ್ಯಾಂಕ್ ಸೇವಾ ಅವಧಿ ಬೆಳಗ್ಗೆ 8ರಿಂದ 11ರ ವರೆಗೆ ಜಾರಿಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಮನವಿ

29/05/2021, 07:55

ಮಂಗಳೂರು(reporterkarnataka news): ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆ ವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. 

ಈ ಹಿಂದೆ ಬ್ಯಾಂಕ್ ಗ್ರಾಹಕ ವ್ಯವಹಾರದ ಅವಧಿಯನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ನೀಡಲಾಗಿತ್ತು. ಆದರೆ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯ ವರೆಗೆ ಸಮಯಾವಕಾಶ ನೀಡುವುದರಿಂದ ಸಾರ್ವಜನಿಕರಿಗೆ ಓಡಾಟಕ್ಕೆ ಬಹಳಷ್ಟು ಅನುಕೂಲವಾಗಲಿದೆ‌. ಲಾಕ್ ಡೌನ್ ಸಡಿಲಿಕೆಯ ಅವಧಿಯಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಓಡಾಡಬಹುದು. ಮಾತ್ರವಲ್ಲ ಬ್ಯಾಂಕ್ ನೌಕರರಿಗೂ ಇದರಿಂದ ಬೇಗನೆ ಕೆಲಸ ಕಾರ್ಯಗಳನ್ನು ಮುಗಿಸಿ ಮನೆ ಸೇರುವಲ್ಲಿ ಸಹಕಾರಿಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು