12:43 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಬ್ಯಾಂಕ್ ಸೇವಾ ಅವಧಿ ಬೆಳಗ್ಗೆ 8ರಿಂದ 11ರ ವರೆಗೆ ಜಾರಿಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಮನವಿ

29/05/2021, 07:55

ಮಂಗಳೂರು(reporterkarnataka news): ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆ ವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. 

ಈ ಹಿಂದೆ ಬ್ಯಾಂಕ್ ಗ್ರಾಹಕ ವ್ಯವಹಾರದ ಅವಧಿಯನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ನೀಡಲಾಗಿತ್ತು. ಆದರೆ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಬೆಳಗ್ಗೆ 8 ಗಂಟೆಯಿಂದ 11 ಗಂಟೆಯ ವರೆಗೆ ಸಮಯಾವಕಾಶ ನೀಡುವುದರಿಂದ ಸಾರ್ವಜನಿಕರಿಗೆ ಓಡಾಟಕ್ಕೆ ಬಹಳಷ್ಟು ಅನುಕೂಲವಾಗಲಿದೆ‌. ಲಾಕ್ ಡೌನ್ ಸಡಿಲಿಕೆಯ ಅವಧಿಯಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಓಡಾಡಬಹುದು. ಮಾತ್ರವಲ್ಲ ಬ್ಯಾಂಕ್ ನೌಕರರಿಗೂ ಇದರಿಂದ ಬೇಗನೆ ಕೆಲಸ ಕಾರ್ಯಗಳನ್ನು ಮುಗಿಸಿ ಮನೆ ಸೇರುವಲ್ಲಿ ಸಹಕಾರಿಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು