4:11 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮೆಣಸಿನ ಕಾಯಿ ಸಸಿಗೆ ಸಿಂಪಡಿಸುವ ಎಣ್ಣೆಯಲ್ಲಿ ಮೋಸ: ಮಾನ್ವಿ ಸಹಾಯಕ ಕೃಷಿ ನಿರ್ದೇಶಕರಿಗೆ ರೈತ ಸಂಘ ದೂರು

10/11/2021, 15:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು,
info.reporterkarnataka@gmail.com

ಜಿಲ್ಲೆಯ ಸಿರಿವಾರ ತಾಲೂಕಿನ ಪಟಕನದೊಡ್ಡಿ ಗ್ರಾಮದ ರೈತ ಮಾನ್ವಿಯ ವೆಂಟಕ ಸಾಯಿ ಟೆಂಡರ್ಸ್ ಎಂಬ ಅಂಗಡಿಯಿಂದ ಖರೀದಿಸಿದ
ಮೆಣಸಿನಕಾಯಿ ಸಸಿಗೆ ಸಿಂಪಣಿ ಮಾಡುವ ಎಣ್ಣಿಯಿಂದ ಎರಡೇ ದಿನಗಳಲ್ಲಿ ಮೆಣಸಿನ ಸಸಿ ಸಂಪೂರ್ಣ ಸುಟ್ಟು ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಈ ವಿಷಯವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ರೂಪ ಶ್ರೀನಿವಾಸ್ ನಾಯಕ್ ಅವರಿಗೆ ತಿಳಿಸಿದ್ದು, ಅವರು

ಬುಧವಾರ ಮಾನ್ವಿ ಸಹಾಯಕ ಕೃಷಿ ನಿರ್ದೇಶಕ ಕಾರ್ಯಾಲಯಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ನಂತರ ಅಧಿಕಾರಿಗಳು ಟ್ರೇಡರ್ಸ ಅಂಗಡಿ ಮಾಲೀಕ ಮಾರುವ ಎಣ್ಣೆ ಹೆಸರು (Foshion power & stany microFood) ತಕ್ಷಣ ರದ್ದುಪಡಿಸಿದ್ದಾರೆ. 

ಅಂಗಡಿಯಲ್ಲಿ ಮಾರಾಟ ಮಾಡುವ ಎಲ್ಲ ವಸ್ತುಗಳ ಪರಿಶೀಲನೆ ನಡೆಸಬೇಕು, ಅಂಗಡಿಯ ಪರವಾನಗಿ ರದ್ದುಪಡಿಸಬೇಕು ಮತ್ತು ಸಂತ್ರಸ್ತ ರೈತನಿಗೆ ಪರಿಹಾರ ನೀಡಬೇಕೆಂದು ರೂಪಾ ಶ್ರೀನಿವಾಸ ನಾಯಕ್ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್, ಮಾನ್ವಿ ತಾಲೂಕು ಅಧ್ಯಕ್ಷ ಬಸವರಾಜ್, ಸಿರಿವಾರ ತಾಲೂಕು ಅಧ್ಯಕ್ಷ ನಾಗರಾಜ್, ಮರಿಲಿಂಗ ಪಾಟೀಲ್, ಉಪಾಧ್ಯಕ್ಷರಾದ ವಿರೇಶ್, ಶಾಮು, ಇನ್ನು ಇತರ ರೈತ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು