1:36 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಜಾನಪದ ಸಾಹಿತ್ಯ ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ: ಕೆ.ಪಿ. ಶೆಣೈ

10/11/2021, 15:35

ಕಾರ್ಕಳ(reporterkarnataka.com): ಜಾನಪದ ಸಾಹಿತ್ಯ ಅನ್ನುವುದು ನಮ್ಮ ಹಿರಿಯರಿಂದ ಬಂದಿದ್ದು. ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ. ಲಿಖಿತ ರೂಪದಲ್ಲಿ ಇಲ್ಲದೆ ಬಾಯಿಯಿಂದ ಬಾಯಿಗೆ ಹರಡಿರುವ ಅತ್ಯಂತ ಶ್ರೀಮಂತ ಸಾಹಿತ್ಯವಾಗಿದೆ. 
ಕೆ.ಪಿ.ಶೆಣೈ ಹೇಳಿದರು. ಅವರು ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಂಗಣ ಎಸ್.ವಿ.ಟಿ ಕಾರ್ಕಳದಲ್ಲಿ ಜರುಗಿದ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಇದರ ಕಾರ್ಕಳ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 

ನೂತನ ತಾಲೂಕು ಅಧ್ಯಕ್ಷರಾಗಿ ದೇವದಾಸ್ ಹಾಗೂ ತಂಡ ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷತೆಯನ್ನು ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ  ಡಾ.ಗಣೇಶ್ ಗಂಗೊಳ್ಳಿ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಕನ್ನಡ ಜಾನಪದ ಪರಿಷತ್ ಕರಾವಳಿ ಜಿಲ್ಲೆಗಳ ವಿಭಾಗೀಯ ಸಂಚಾಲಕಿ ಡಾ. ಭಾರತಿ ಮರವಂತೆ ಶುಭಸಂಸನೆ ಗೈದರು.

ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕಿನ ನಿಕಟಪೂರ್ವಾಧ್ಯಕ್ಷ  ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಎಸ್.ವಿ‌.ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮದಾಸ ಪ್ರಭು, ಎಸ್.ವಿ‌.ಟಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಯೋಗೇಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಸಂಚಾಲಕ ಚಂದ್ರನಾಥ್ ಬಜಗೋಳಿ ಸ್ವಾಗತಿಸಿ, 

ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಮಂಜುನಾಥ್ ಕೆ. ಶಿವಪುರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು