11:17 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಜಾನಪದ ಸಾಹಿತ್ಯ ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ: ಕೆ.ಪಿ. ಶೆಣೈ

10/11/2021, 15:35

ಕಾರ್ಕಳ(reporterkarnataka.com): ಜಾನಪದ ಸಾಹಿತ್ಯ ಅನ್ನುವುದು ನಮ್ಮ ಹಿರಿಯರಿಂದ ಬಂದಿದ್ದು. ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ. ಲಿಖಿತ ರೂಪದಲ್ಲಿ ಇಲ್ಲದೆ ಬಾಯಿಯಿಂದ ಬಾಯಿಗೆ ಹರಡಿರುವ ಅತ್ಯಂತ ಶ್ರೀಮಂತ ಸಾಹಿತ್ಯವಾಗಿದೆ. 
ಕೆ.ಪಿ.ಶೆಣೈ ಹೇಳಿದರು. ಅವರು ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಂಗಣ ಎಸ್.ವಿ.ಟಿ ಕಾರ್ಕಳದಲ್ಲಿ ಜರುಗಿದ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಇದರ ಕಾರ್ಕಳ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 

ನೂತನ ತಾಲೂಕು ಅಧ್ಯಕ್ಷರಾಗಿ ದೇವದಾಸ್ ಹಾಗೂ ತಂಡ ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷತೆಯನ್ನು ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ  ಡಾ.ಗಣೇಶ್ ಗಂಗೊಳ್ಳಿ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಕನ್ನಡ ಜಾನಪದ ಪರಿಷತ್ ಕರಾವಳಿ ಜಿಲ್ಲೆಗಳ ವಿಭಾಗೀಯ ಸಂಚಾಲಕಿ ಡಾ. ಭಾರತಿ ಮರವಂತೆ ಶುಭಸಂಸನೆ ಗೈದರು.

ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕಿನ ನಿಕಟಪೂರ್ವಾಧ್ಯಕ್ಷ  ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಎಸ್.ವಿ‌.ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮದಾಸ ಪ್ರಭು, ಎಸ್.ವಿ‌.ಟಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಯೋಗೇಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಸಂಚಾಲಕ ಚಂದ್ರನಾಥ್ ಬಜಗೋಳಿ ಸ್ವಾಗತಿಸಿ, 

ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಮಂಜುನಾಥ್ ಕೆ. ಶಿವಪುರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು