5:37 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಗೆ ಸ್ಪರ್ಧಿಸುವುದಾದರೆ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ: ಡಾ. ಎಂ. ಎನ್. ರಾಜೇಂದ್ರ ಕುಮಾರ್

10/11/2021, 22:08

ಉಡುಪಿ(reporterkarnataka.com): ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾದರೆ ನಾನು ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ.

ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಸ್ಪರ್ಧಿಸುವ ಕುರಿತು ಎರಡು ಮೂರು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಉಡುಪಿಯಲ್ಲಿ ಬುಧವಾರ ಮಾಧ್ಯಮ ಜತೆ
ಮಾತನಾಡಿದ ಅವರು ನುಡಿದರು.

ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಒತ್ತಡ ಬರುತ್ತಿರುವುದು ನಿಜ. ಇದು ಪಕ್ಷಗಳ ಮಧ್ಯೆ ನಡೆಯುವ ಚುನಾವಣೆಯಾಗಿದೆ. ನಾನು ಎಲ್ಲ ಪಕ್ಷಗಳ ಮಧ್ಯೆ ಇದ್ದೇನೆ. ಹಾಗಾಗಿ ಸ್ಪರ್ಧಿಸುವ ಬಗ್ಗೆ ಆಲೋಚನೆ ಮಾಡಬೇಕಾಗಿದೆ. ನಾಮಪತ್ರ ಸಲ್ಲಿಸುವುದಿದ್ದರೆ ಕೊನೆಯ ದಿನವಾದ ನ.17ಕ್ಕೆ ಸಲ್ಲಿಸುತ್ತೇನೆ ಎಂದರು.

ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್ತಿನಲ್ಲಿ ಕನಿಷ್ಟ ಎರಡು ಸ್ಥಾನವನ್ನಾದರೂ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪಕ್ಷಗಳಿಂದ ಆಹ್ವಾನ ಬಂದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದವರು ನನ್ನನ್ನು ಕರೆಯುತ್ತಾರೆ. ಆದರೆ ಹೋಗಬೇಕೆ ಬೇಡವೇ ಎಂಬುದು ನನ್ನ ಇಷ್ಟ. ಆದರೆ ನಾನು ಯಾವುದೇ ಪಕ್ಷದಡಿಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದರು.ನವೋದಯ ಸದಸ್ಯರು, ಗ್ರಾಪಂ ಸದಸ್ಯರು ಹಾಗೂ ಸಹಕಾರಿಗಳು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇರುವ ಶೇ.50ರಷ್ಟು ಮಂದಿ ಗ್ರಾಪಂ ಸದಸ್ಯರುಗಳಾಗಿದ್ದಾರೆ. ಇದರಲ್ಲಿ ಶೇ.30ರಷ್ಟು ಮಂದಿ ಮಹಿಳೆಯರು ನವೋದಯ ಸೇರಿದಂತೆ ಇತರ ಗುಂಪುಗಳಿಗೆ ಸೇರಿದವರಾಗಿದ್ದಾರೆ. ಆದ್ದರಿಂದ ಇವರೆಲ್ಲರು ಸಹಕಾರಿ ಕ್ಷೇತ್ರಕ್ಕೆ ಪ್ರಾತಿನಿಧ್ಯ ಸಿಗಲಿ ಎಂಬ ಉದ್ದೇಶದಿಂದ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಇವರು ಸ್ಪರ್ಧೆ ಮಾಡುವಂತೆ ಹೇಳಿದ್ದರೆಯೇ ಹೊರತು ಯಾರು ಕೂಡ ಪಕ್ಷದಿಂದ ಸ್ಪರ್ಧಿಸಿ ಎಂದು ಹೇಳಿಲ್ಲ. ನಾನು ಎಲ್ಲೂ ರಾಜಕೀಯ ಮಾಡುವುದಿಲ್ಲ. ಸಹಕಾರಿ, ಬಡವರ, ಸ್ವಸಹಾಯ ಸಂಘಗಳ ಗುಂಪುಗಳ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು