12:11 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಹಾಲಿನ ವಾಹನ- ಸ್ಕೂಟರ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ದೀಪಾವಳಿಗೆ ಖರೀದಿಸಿದ ಹೊಸ ಸ್ಕೂಟರ್

11/11/2021, 12:13

ಹಿರಿಯಡಕ(reporterkarnataka.com): ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ.


ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ ವಿಘ್ನೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ವಿಘ್ನೇಶ್ ಮಣಿಪಾಲದ ಪ್ರೆಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ಬಜಗೋಳಿಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಹಾಲಿನ ವಾಹನಕ್ಕೆ ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ವಿಘ್ನೇಶ್ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ ಎಂದು ತಿಳಿದು ಬಂದಿದೆ. 

ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಘ್ನೇಶ್ ದೀಪಾವಳಿಗೆ ನೂತನವಾಗಿ ದ್ವಿಚಕ್ರವಾಹನ ಖರೀದಿಸಿದ್ದನು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಹಿರಿಯಡ್ಕ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು