9:50 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ರಂಗದ ನೇತಾರ ಪಮ್ಮಿ ಕೊಡಿಯಾಲ್ ಬೈಲ್ ಗೆ ನಿಗಮ – ಮಂಡಳಿಗಳಲ್ಲಿ ಪ್ರಾತಿನಿಧ್ಯ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಗೆ ಮನವಿ

11/11/2021, 15:28

ಮಂಗಳೂರು(reporterkarnataka.com):
ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ರಂಗದ ಮುಂದಾಳು ಪ್ರವೀಣ್ ಕುಮಾರ್ (ಪಮ್ಮಿ) ಕೊಡಿಯಾಲ್ ಬೈಲ್ ಅವರು ತಮ್ಮ ವಿಶಿಷ್ಟ ಸೇವಾ ಮನೋಭಾವದಿಂದ ನಾಡಿನೆಲ್ಲೆಡೆ ಪರಿಚಿತರಾಗಿದ್ದಾರೆ. ಜನ ಸಾಮಾನ್ಯರ  ನೋವು- ನಲಿವು, ದುಃಖ- ದುಮ್ಮಾನಗಳಿಗೆ ತನ್ನ ಬದುಕನ್ನೇ ಧಾರೆಯೆರೆದ ಅವರಿಗೆ ನಿಗಮ -ಮಂಡಳಿಯಲ್ಲಿ ಪ್ರಾತಿನಿಧ್ಯ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಲಾಗಿದೆ.

ಪ್ರವೀಣ್ ಕುಮಾರ್  ಅವರು ಧಾಮಿ೯ಕ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಅಸಂಖ್ಯಾತ ಬಡ ಬಗ್ಗರ, ದೀನ, ದುಖಿ:ತರ ಆಶ್ರಯದಾತರಾಗಿರುವ  ಪಮ್ಮಿ ಅವರು ವಿಭಿನ್ನ ರೀತಿಯ ಅಧ್ಯಾಯವನ್ನು ಸೃಷ್ಠಿಸಿದ ಮೇರು ವ್ಯಕ್ತಿತ್ವದ ಯುವ  ಧುರೀಣರಾಗಿದ್ದಾರೆ.  ತನ್ನ ವರಮಾನದ ಬಹು ಭಾಗವನ್ನು ಧಾಮಿ೯ಕ, ಸಾಮಾಜಿಕ ರಂಗಗಳಲ್ಲಿ ಧಾರೆಯೆರೆದು ಸಮಾಜದ ಬಹುಮುಖ ಪ್ರಗತಿಗಾಗಿ ರಾತ್ರಿ ಹಗಲೆನ್ನದೆ ದುಡಿಯುತ್ತಿರುವ ಕ್ರಿಯಾಶೀಲ ವ್ಯಕ್ತಿ.

ಶ್ರೀ ಭಗವತಿ ದೇವಸ್ಥಾನದ ಅಭಿವೃದ್ಧಿಗಾಗಿ ರಾತ್ರಿ, ಹಗಲೆನ್ನದೆ ದುಡಿಯುತ್ತಿರುವ  ಅವರು ಧಾಮಿ೯ಕ, ಸಾಂಸ್ಕ್ರತಿಕ, ಸಾಹಿತ್ಯಿಕ, ಚಲನ ಚಿತ್ರ ನಿಮಾ೯ಣ ಮುಂತಾದ ವಿವಿಧ ರಂಗಗಳಲ್ಲಿ ವಿಜೃಂಭಿಸಿ ಜನ ಮನಗಳ ಹೃದಯದಲ್ಲಿ ನೆಲೆಸಿದ್ದಾರೆ.

ಸಾಮಾಜಿಕ ರಂಗದ ಬಹುದೊಡ್ಡ ಹೆಸರಾದ ಪಮ್ಮಿ ಕೊಡಿಯಾಲ್ ಬೈಲ್ ಬಡವ – ಬಲ್ಲಿದ,  ಹಿರಿಯ – ಕಿರಿಯ ಭೇದಭಾವವಿಲ್ಲದ ಎಲ್ಲರೊಂದಿಗೆ ಮಾನವೀಯತೆಯಿಂದ ವತಿ೯ಸುವ ಹೃದಯ ಶ್ರೀಮಂತಿಕೆಯ ಓವ೯ ತ್ಯಾಗ ಜೀವಿಯಾಗಿದ್ದಾರೆ.  ಅಹಂಕಾರ, ಅಹಂಭಾವಗಳ ಪರಿಚಯವೇ ಇಲ್ಲದ, ದ್ವೇಷ ಮತ್ಸರಗಳ ಅರಿವಿಲ್ಲದ ಸರಳ ನಿರಾಂಡಬರ ವ್ಯಕ್ತಿತ್ವದ ನಿಷ್ಕಳಂಕತೆಯ ನಿಜರೂಪದ ಸದ್ಗುಣ ಸಂಪನ್ನತೆ, ಸಚ್ಚಾರಿತ್ಯಗಳ ಸಂಗಮವಾಗಿರುವ  ಪ್ರವೀಣ್ ಕುಮಾರ್ (ಪಮ್ಮಿ) ಕೊಡಿಯಾಲ್ ಬೈಲ್ ರವರಿಗೆ ಕನಾ೯ಟಕ ಸರಕಾರವು ನಿಗಮ ಮಂಡಳಿಗಳನ್ನು  ಪುನಾ ರಚನೆ ಮಾಡುವ ಸಂದಭ೯ದಲ್ಲಿ ಸೂಕ್ತ ಪ್ರಾತಿನಿಧ್ಯ  ನೀಡ ಬೇಕಾಗಿದೆ.  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಪ್ರವೀಣ್ ಕುಮಾರ್ (ಪಮ್ಮಿ) ರವರಿಗೆ ರಾಜ್ಯದ ನಿಗಮ ಮಂಡಳಿಯ ಸೂಕ್ತ ಹುದ್ದೆ ದೊರಕಿಸಿ ಕೊಡುತ್ತಾರೆಂಬ ಭರವಸೆ ಜಿಲ್ಲೆಯ ಜನತೆಯದ್ದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು