5:37 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕಿಕ್ಕಿರಿದು ತುಂಬಿದ್ದ ಬಸ್ ಬಾಗಿಲಿಗೆ ಜೋತು ಬಿದ್ದು ವಿದ್ಯಾರ್ಥಿಗಳ ಪ್ರಯಾಣ: ಮಾಜಿ ಸಾರಿಗೆ ಸಚಿವ ಸವದಿ ತವರಿನಲ್ಲಿ ಇದು ಸಾಮಾನ್ಯ!

11/11/2021, 18:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಮಾನ್ಯ ಅಂದ್ರೆ ಬಸ್ಸಿನಲ್ಲಿ 40ರಿಂದ ಅಥವಾ 50 ಜನರು ಪ್ರಯಾಣ ಮಾಡಬಹುದು. ಆದರೆ ಪ್ರಯಾಣಿಕರ ಸಂಖ್ಯೆ 100ರ ಗಡಿ ದಾಟಿದರೆ ಹೇಗೆ? ಇದು ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆಯಲ್ಲಿ ಸಾಮಾನ್ಯವಾಗಿ ಕಂಡು ಬರುವ ದೃಶ್ಯ.

ಅಥಣಿ ಕೆ ಎಸ್ ಆರ್ ಟಿ ಬಸ್ ನಲ್ಲಿ ಸರಿ ಸುಮಾರು 120 ಕಿಂತಲೂ ಹೆಚ್ಚೂ ಜನರು ಪ್ರಯಾಣ ಮಾಡುತ್ತಾರೆ. ಸಕಾಲದಲ್ಲಿ ಮನೆಗೆ, ಮನೆಯಿಂದ ಶಾಲಾ – ಕಾಲೇಜು, ಕಚೇರಿ, ಪಟ್ಟಣ ತಲುಪಬೇಕಾದರೆ ಇದು ಅನಿವಾರ್ಯ ಕೂಡ. ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರ ಸಂಖ್ಯೆ ವಿಪರೀತವಿರುತ್ತದೆ. ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣ ಮಾಡುವ ಪರಿಸ್ಥಿತಿ ಎದುರಾಗಿದೆ. ಆರ್ ಟಿಒ ನಿಯಮ ಪ್ರಕಾರ ಸೀಟು ಭರ್ತಿಯಾದ ಬಳಿಕ 10 ಮಂದಿಗೆ ನಿಂತು ಪ್ರಯಾಣಿಸಲು ಅವಕಾಶವಿರುತ್ತದೆ. ಅದಕ್ಕಿಂತ ಹೆಚ್ಚು ಪ್ರಯಾಣಿಕರು ಬಸ್ ತುಂಬಿದ್ದರೆ ಅದನ್ನು ಓವರ್ ಲೋಡ್ ಎಂದೇ ವ್ಯಾಖ್ಯಾನಿಸಲಾಗುತ್ತದೆ.

ಅಥಣಿ ಪಟ್ಟಣದಿಂದ ಖೀಳೆಗಾವ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬಸ್ಸಿನಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿ ಅಪಾಯವನ್ನು ಲೆಕ್ಕಿಸದೆ ಪ್ರಯಾಣ ಮಾಡುವ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು ಬಸ್  ಬಾಗಿಲಿಗೆ ಜೋತು ಬಿದ್ದು ಪ್ರಯಾಣ ಮಾಡುತ್ತಿದ್ದು, ನೋಡುಗರ ಎದೆ ಝಳ್ ಎನಿಸುತ್ತದೆ.

ಈ ಮಾರ್ಗವಾಗಿ ಹಲವು ಗ್ರಾಮಗಳು ಬರುವುದರಿಂದ ಸಾಮಾನ್ಯವಾಗಿ ಜನರು ಇದೇ ಬಸ್ಸನ್ನು ಅವಲಂಬಿಸಿದ್ದಾರೆ. ಒಂದು ಬಸ್ನಲ್ಲಿ 40ರಿಂದ 45 ಸೀಟು ಮಾತ್ರ ಇರುತ್ತದೆ. 10 ಮಂದಿಗೆ ನಿಂತು ಪ್ರಯಾಣಿಸಲು ಅವಕಾಶವಿರುತ್ತದೆ.ಆದರೆ ಈ ಬಸ್ ನಲ್ಲಿ ಸರಿಸುಮಾರು 120 ಹೆಚ್ಚು ಪ್ರಾಮಾಣಿಕರು ಸಂಚಾರ ಮಾಡುವ ಅನಿವಾರ್ಯತೆ ಎದುರಾಗಿದೆ. ಅಥಣಿ ಕೆಎಸ್ ಆರ್ ಟಿಸಿ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಅಪಾಯದಲ್ಲಿ ವಿದ್ಯಾರ್ಥಿಗಳು ಸಂಚಾರ ಮಾಡುವಂತಾಗಿದೆ. ಸಂಚಾರ ಸಂದರ್ಭದಲ್ಲಿ ಒಂದು ಕಡೆ ವಾಲಿಕೊಂಡು ಬಸ್ ಚಲಿಸುತ್ತದೆ.

ಬಸ್ ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸಾಮಾನ್ಯವಾಗಿ ಒಂದು ಕಡೆ ವಾಲಿಕೊಂಡು ಬಸ್ ಚಲಿಸುತ್ತದೆ. ಒಳಗೆ ಕುಳಿತ ಪ್ರಯಾಣಿಕರು ಆತಂಕದಲ್ಲಿ ಸಂಚಾರ ಮಾಡುವಂತಾಗಿದೆ.

ದಿನನಿತ್ಯ ಬಸ್ನಲ್ಲಿ ಜನದಟ್ಟಣೆ ಆಗುವುದು ಸಹಜ ಇದರಿಂದ ಪ್ರಯಾಣಿಕರು ಜೀವಭಯದಲ್ಲಿ ಸಂಚಾರ ಮಾಡುವಂತಾಗಿದೆ. 

ವಯೋವೃದ್ಧರು, ಗರ್ಭಿಣಿಯರು ಮತ್ತು ಚಿಕ್ಕ ಮಕ್ಕಳಿಗೆ ಜನದಟ್ಟನೆಯಿಂದ ಸಂಕಷ್ಟ ಎದುರಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ‌.

ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಶಶಿಕಾಂತ ಪಾದಸಲಗಿ ಮಾತನಾಡಿ, ಸರಿಯಾದ ಬಸ್ ವ್ಯವಸ್ಥೆ ತಕ್ಷಣ
ಕಲ್ಪಿಸಿ. ಏನಾದರೂ ಅನಾಹುತ ಕಂಡು ಬಂದಲ್ಲಿ ನೇರ ಹೊಣೆಗಾರರು ನೀವೇ ಆಗುತ್ತೀರಿ. ಇನ್ನೆರಡು ದಿನದಲ್ಲಿ ಬಸ್ ವ್ಯವಸ್ಥೆಯಾಗದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು