2:38 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಐಶ್ವರ್ಯವಿದ್ದರೆ ಸಾಲದು ಅದರ ಸದ್ಬಳಕೆಯಾಗಬೇಕು, ಜನಸೇವೆ ಜನ ಮಾನಸದಲ್ಲಿ ಉಳಿಯಬೇಕು: ರಾಜೇಶ್ ಶೆಣೈ

12/11/2021, 07:50

ಕಾರ್ಕಳ(reporterkarnataka.com): ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸು ಮನುಷ್ಯನಿಗೆ ಇರಬೇಕೇ ಹೊರತು ಆತನಲ್ಲಿ ಐಶ್ವರ್ಯ ಮಾತ್ರ ಇದ್ದರೇ ಪ್ರಯೋಜನ ಇಲ್ಲ. ಅದರ ಸದ್ಬಳಕೆ ಆಗಬೇಕು. ಆಗ ಮಾತ್ರ ಆ ಐಶ್ವರ್ಯಕ್ಕೆ ಬೆಲೆ ಬರುತ್ತದೆ. ನಾವು ಮಾಡುವ ಸಮಾಜ ಸೇವೆ ಸಮಾಜ ಮುಖಿಯಾಗಿ ಜನ ಮಾನಸದಲ್ಲಿ ಉಳಿಯಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಶೆಣೈ ಹೇಳಿದರು.

ಇವರು ಕಾರ್ಕಳದ ಎಸ್ ವಿ ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಇಲ್ಲಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕನ್ನಡ ಡಿಂಡಿಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದ ಆಗುಹೋಗುಗಳ ಬಗ್ಗೆ ನಾವು ಸ್ಪಂದಿಸುವ ಗುಣಗಳನ್ನು ನಾವು ಹೊಂದಬೇಕು .ಬೇರೆಯವರ ಸಮಸ್ಯೆಗಳನ್ನು ಬಗೆಹರಿಸಲು ನಾವು ಪ್ರಯತ್ನಿಸುವುದರಲ್ಲಿ ನಮ್ಮ ಸಂತೋಷ ಕಾಣುವಂತಾಗಬೇಕು ಆಗ ಖಂಡಿತವಾಗಿಯೂ ನಮ್ಮ ಜೇವನ ಸಾರ್ಥಕವಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಲಯನ್ಸ್  ಮಿಥುನ್ ಹೆಗ್ಡೆ ಅವರು, ಕಳೆದ 4 ತಿಂಗಳಲ್ಲಿ  ಅಧ್ಯಕ್ಷ ರಾಜೇಶ್ ಶೆಣೈ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಕಾರ್ಕಳ ಘಟಕವು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಕನ್ನಡ ನಾಡು ನುಡಿ ಜೊತೆಗೆ ಸಮಾಜದ ಬಡಜನತೆ ,ವಿದ್ಯಾರ್ಥಿಗಳು ಹಾಗೂ ಶ್ರಮಿಕ ವರ್ಗದ ಜನರಿಗೆ ಯಾವುದೇ ಪ್ರತಫಲಾಪೇಕ್ಷೆ ಇಲ್ಲದ  ನಿರಂತರ ಒಂದಲ್ಲ ಒಂದು ಸಹಾಯವನ್ನು ನೀಡುತ್ತಿರುವ ರಾಜೇಶ್ ಶೆಣೈ ನಿಜವಾಗಿಯೂ ಅಭಿನಂದನಾರ್ಹರು ಎಂದರು

ಈ ಸಂಧರ್ಭದಲ್ಲಿ ಎಸ್ ವಿ ಟಿ ಹಿರಿಯ ಪ್ರಾಥಮಿಕ ಶಾಲೆಗೆ ರಾಜೇಶ್ ಶೆಣೈ ಯವರು ಲಯನ್ಸ್ ಕ್ಲಬ್ ಮುಖಾಂತರ ಕಂಪ್ಯೂಟರ್, ಪ್ರಿಂಟರ್, ಯೂಪಿಎಸ್ ಹಾಗೂ ಸುಮಾರು 300 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.


ವೇದಿಕೆಯಲ್ಲಿ ಎಸ್‌ ವಿ ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಂಡಳಿ ಕಾರ್ಯದರ್ಶಿ ಕೆ ಪಿ ಶೆಣೈ, ಟ್ರಸ್ಟಿ ರವೀಂದ್ರ ಪೈ  ಲಯನ್ಸ್ ವಲಯಾಧ್ಯಕ್ಷ ಸುಭಾಸ್ ಸುವರ್ಣ,ಕೋಶಾಧಿಕಾರಿ ಪ್ರಕಾಶ್ ಪಿಂಟೋ ಡಾ.ರಾಬರ್ಟ್ ಡಿಮೆಲ್ಲೊ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು