11:27 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? 

12/11/2021, 13:48

(reporterkarnataka.com): 

ಮಧ್ಯಪ್ರದೇಶದ ಜಬಲ್‌‌ಪುರದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಜಯ್‌ ಯಾದವ್‌ ಅವರ ಪುತ್ರ

ವೈಭವ್‌ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ

ವೈಭವ್‌ ಬಚ್ಚಲು ಮನೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಗುಂಡಿನ ಸದ್ದು ಕೇಳಿದ ತಕ್ಷಣ ಕುಟುಂಬಸ್ಥರು ಧಾವಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆ ಕೊಂಡೊಯ್ಯಲಾಯಿತ್ತಾದರೂ ಆತ ಅದಾಗಲೇ ಸಾವನ್ನಪ್ಪಿದ್ದ.

ಆತನ ಡೆತ್‌ ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ಜಬಲ್‌ಪುರದ ಪೊಲೀಸ್‌‌‌ ವರಿಷ್ಠಾಧಿಕಾರಿ ಸಿದ್ಧಾರ್ಥ್ ಬಹುಗುಣ ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮೊದಲು ವೈಭವ್‌ ತನ್ನ ಎಲ್ಲಾ ಸ್ನೇಹಿತರಿಗೆ ಕರೆ ಮಾಡಿದ್ದು, ಇಷ್ಟು ದಿನ ತನ್ನೊಂದಿಗೆ ಕಳೆದರುವುದಕ್ಕೆ ಹಾಗೂ ತನ್ನ ಸ್ನೇಹಿತರಾಗಿರುವುದಕ್ಕೆ ಧನ್ಯವಾದ ತಿಳಿಸಿದ್ದಾನೆ ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು