2:32 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ; ದಲಿತರ ಪರ ಅತೀ ಹೆಚ್ಚು ಕೆಲಸ ಮಾಡಿದವರು: ಕೃಷ್ಣ ಡಿ.ಚಿಗರಿ

13/11/2021, 09:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಿತ್ತುಕೊಳ್ಳುತ್ತಿರುವ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ತಿರುಚಿ ಅಪಪ್ರಚಾರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಸಂಗತಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಹೇಳಿದರು.

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಬ್ಬ ನಿಜವಾದ ಅಂಬೇಡ್ಕರ್ ವಾದಿ. ದಲಿತರಿಗೆ SCP/STP ಕಾಯ್ದೆ, ಜಾರಿಗೊಳಿಸಿ, ಗುತ್ತಿಗೆ ಮೀಸಲಾತಿ ಅವಕಾಶ ಕಲ್ಪಿಸಿ, ಬಡ್ತಿ ಮೀಸಲಾತಿ ಯೋಜನೆ ರೂಪಿಸಿ, ಕಲ್ಲು ಗಣಿಗಾರಿಕೆಯಲ್ಲಿ ಮೀಸಲಾತಿ, ಕೈಗಾರಿಕೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ ಸಿದ್ದರಾಮಯ್ಯ ಅವರು SCP/STP ಕಾಯ್ದೆಯಡಿ 30 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ನಿಗದಿಗೊಳಿಸಿದರು ಎಂದರು.

ಬಹುಶಃ ಈಗ ದೊಡ್ಡದಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಯಾವ ನಾಯಕರೂ ಕೂಡಾ ಸಿದ್ದರಾಮಯ್ಯನವರ ರೀತಿ ತಮ್ಮ ರಾಜಕೀಯ ಇತಿಹಾಸದಲ್ಲಿ ದಲಿತರ ಪರವಾದ ಕಾರ್ಯಕ್ರಮ ರೂಪಿಸುವುದಿರಲಿ, ಅವರಂತೆ ಯೋಚಿಸಲೂ ಕೂಡಾ ಸಾಧ್ಯವಿಲ್ಲ.ಅಂಬೇಡ್ಕರ್ ಸಿದ್ದಾಂತವನ್ನು ತಮ್ಮಬದುಕಲ್ಲೇ ಅಳವಡಿಸಿಕೊಂಡಿರುವ ಸಿದ್ದರಾಮಯ್ಯ ಅವರು ಎಂದಿಗೂ ದಲಿತರ ವಿರುದ್ಧವಾಗಿ ಹಗುರವಾಗಿ ಹಿಂದೆಯೂ ಮಾತನಾಡಿಲ್ಲ, ಇಂದೂ ಮಾತಾಡಿಲ್ಲ ಮುಂದೆಯೂ ಮಾತನಾಡಲ್ಲ ಎಂದು ಅವರು ನುಡಿದರು.

ದಲಿತರ ಹಿತಾಸಕ್ತಿ ಕಾಪಾಡುವ ಜಾಗದಲ್ಲಿ ದಲಿತರ ಅವಕಾಶಗಳನ್ನು ತಪ್ಪಿಸುತ್ತಿರುವ ಬಿಜೆಪಿಯ ದಲಿತ ನಾಯಕರು ತಮ್ಮ ಸುಳ್ಳು ಪ್ರಚಾರಕ್ಕೆ ಮತ್ತು ದಲಿತ ವಿರೋಧಿ ನೀತಿಗಳಿಗಾಗಿ ರಾಜ್ಯದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಈ ಮೂಲಕ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು