5:49 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ

13/11/2021, 11:03

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡಿದ್ದಾರೆ.

ಶ್ರೀಊರಮ್ಮ ದೇವಿಯ ಸನ್ನಿದಾನದಲ್ಲಿ ತಮ್ಮ ಕುಟುಂಬ ಸದಸ್ಯರೊಡಗೂಡಿ ದೇವಸ್ಥಾನದ ಸನ್ನಿದಾನದಲ್ಲಿ ಸಮಿತಿಯ ಪ್ರಮುಖರಿಗೆ ಹಣ ಸಂದಾಯ ಮಾಡಿದ್ದಾರೆ. ದೈವಜ್ಞರಾದ ಹಿ.ಮ.ಚಿದಾನಂದ ಸ್ವಾಮಿರವರ ನೇತೃತ್ವದಲ್ಲಿ ದೇವಸ್ಥಾನದ ದೈವಸ್ಥರು ದೇಣಿಗೆ ಹಣ ಸ್ವೀಕರಿಸಿದ್ದಾರೆ. ದೇಣಿಗೆ ಹಣ ನೀಡಿದ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣ ಹಾಗೂ ಅವರ ಕುಟುಂಬಕ್ಕೆ, ಶ್ರೀಊರಮ್ಮ ದೇವಿ ಶುಭವನ್ನುಂಟು ಮಾಡಲೆಂದು  ಶ್ರೀಊರಮ್ಮ ದೇವಿಯಲ್ಲಿ ಕೋರಿದ್ದಾರೆ. ಇದೇ ಸಂದರ್ಭದಲ್ಲಿ  ದೈವಸ್ಥರು ತಿಪ್ಪಣ್ಣನವರನ್ನು ಅಭಿನಂದಿಸಿದ್ದಾರೆ. ಶ್ರೀಊರಮ್ಮ ದೇವಿ ದೇವಸ್ಥಾನದ ಸಮತಿಯ ಪ್ರಮುಖರು, ಪಟ್ಟಣ ಪಂಚಾಯ್ತಿ ಸದಸ್ಯರು ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು