11:21 AM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ

13/11/2021, 11:03

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡಿದ್ದಾರೆ.

ಶ್ರೀಊರಮ್ಮ ದೇವಿಯ ಸನ್ನಿದಾನದಲ್ಲಿ ತಮ್ಮ ಕುಟುಂಬ ಸದಸ್ಯರೊಡಗೂಡಿ ದೇವಸ್ಥಾನದ ಸನ್ನಿದಾನದಲ್ಲಿ ಸಮಿತಿಯ ಪ್ರಮುಖರಿಗೆ ಹಣ ಸಂದಾಯ ಮಾಡಿದ್ದಾರೆ. ದೈವಜ್ಞರಾದ ಹಿ.ಮ.ಚಿದಾನಂದ ಸ್ವಾಮಿರವರ ನೇತೃತ್ವದಲ್ಲಿ ದೇವಸ್ಥಾನದ ದೈವಸ್ಥರು ದೇಣಿಗೆ ಹಣ ಸ್ವೀಕರಿಸಿದ್ದಾರೆ. ದೇಣಿಗೆ ಹಣ ನೀಡಿದ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣ ಹಾಗೂ ಅವರ ಕುಟುಂಬಕ್ಕೆ, ಶ್ರೀಊರಮ್ಮ ದೇವಿ ಶುಭವನ್ನುಂಟು ಮಾಡಲೆಂದು  ಶ್ರೀಊರಮ್ಮ ದೇವಿಯಲ್ಲಿ ಕೋರಿದ್ದಾರೆ. ಇದೇ ಸಂದರ್ಭದಲ್ಲಿ  ದೈವಸ್ಥರು ತಿಪ್ಪಣ್ಣನವರನ್ನು ಅಭಿನಂದಿಸಿದ್ದಾರೆ. ಶ್ರೀಊರಮ್ಮ ದೇವಿ ದೇವಸ್ಥಾನದ ಸಮತಿಯ ಪ್ರಮುಖರು, ಪಟ್ಟಣ ಪಂಚಾಯ್ತಿ ಸದಸ್ಯರು ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು