8:46 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಾರ್ಗನ್ಸ್ ಗೇಟ್ : ರಾಮಕ್ಷತ್ರೀಯ ಸಂಘದಿಂದ ನಾಳೆ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

13/11/2021, 20:18

ಮಂಗಳೂರು(reporterkarnataka.com): ಮಂಗಳೂರು ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಯುವ ವೃಂದ ಮತ್ತು ಮಹಿಳಾ ವೃಂದ, ಭಕ್ತವೃಂದ ಗುರುಪರಾಶಕ್ತಿ ಮಠ ಮರಕಡ ಮತ್ತು ಮಂಗಳೂರು ಲಯನ್ಸ್ ಕ್ಲಬ್ ಮಿಲಾಗ್ರೀಸ್, ಶ್ರೀ ಲಕ್ಷ್ಮ ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಬೃಹತ್ ಕಣ್ಣಿನ ಹಾಗೂ ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪು ಮಾರ್ಗನ್ಸ್ ಗೇಟಿನ ರಾಮಕ್ಷತ್ರೀಯ ಮಂದಿರದಲ್ಲಿ ನವೆಂಬರ್ 14ರಂದು ಬೆಳಗ್ಗೆ 9.30ರಿಂದ 12.30ರ ತನಕ ನಡೆಯಲಿದೆ.

ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಶಿಬಿರವನ್ನು ಉದ್ಘಾಟಿಸುವರು. ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಕೆ. ರವೀಂದ್ರ ಅಧ್ಯಕ್ಷತೆ ವಹಿಸುವರು.  ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಜಯರಾಮ ಶೆಟ್ಟಿ, ಕೆಎಂಸಿ ಬ್ಲಡ್‌ ಬ್ಯಾಂಕಿನ ನಿರ್ದೇಶಕರಾದ ಡಾ. ದೀಪಾ ಅಡಿಗ, ಅರಣ್ಯ ಇಲಾಖೆ

ಕರಾವಳಿ ವಲಯ ನಿಯಂತ್ರಣಾಧಿಕಾರಿ ಶ್ರೀಧರ ಪಿ., ಮಂಗಳೂರು ಉತ್ತರ ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು, ಲಯನ್ಸ್ ಕ್ಲಬ್ ಮಂಗಳೂರು ಮಿಲಾಗ್ರೀಸ್ ಅಧ್ಯಕ್ಷ ತುಲಾರ್ ರೈ 

ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಶಿಬಿರದಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ್ಕ ವಿತರಣೆ ಮತ್ತು ದಂತ ಚಿಕಿತ್ಸೆ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು