8:54 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಾರ್ಗನ್ಸ್ ಗೇಟ್ : ರಾಮಕ್ಷತ್ರೀಯ ಸಂಘದಿಂದ ನಾಳೆ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

13/11/2021, 20:18

ಮಂಗಳೂರು(reporterkarnataka.com): ಮಂಗಳೂರು ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಯುವ ವೃಂದ ಮತ್ತು ಮಹಿಳಾ ವೃಂದ, ಭಕ್ತವೃಂದ ಗುರುಪರಾಶಕ್ತಿ ಮಠ ಮರಕಡ ಮತ್ತು ಮಂಗಳೂರು ಲಯನ್ಸ್ ಕ್ಲಬ್ ಮಿಲಾಗ್ರೀಸ್, ಶ್ರೀ ಲಕ್ಷ್ಮ ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಬೃಹತ್ ಕಣ್ಣಿನ ಹಾಗೂ ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪು ಮಾರ್ಗನ್ಸ್ ಗೇಟಿನ ರಾಮಕ್ಷತ್ರೀಯ ಮಂದಿರದಲ್ಲಿ ನವೆಂಬರ್ 14ರಂದು ಬೆಳಗ್ಗೆ 9.30ರಿಂದ 12.30ರ ತನಕ ನಡೆಯಲಿದೆ.

ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಶಿಬಿರವನ್ನು ಉದ್ಘಾಟಿಸುವರು. ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಕೆ. ರವೀಂದ್ರ ಅಧ್ಯಕ್ಷತೆ ವಹಿಸುವರು.  ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಜಯರಾಮ ಶೆಟ್ಟಿ, ಕೆಎಂಸಿ ಬ್ಲಡ್‌ ಬ್ಯಾಂಕಿನ ನಿರ್ದೇಶಕರಾದ ಡಾ. ದೀಪಾ ಅಡಿಗ, ಅರಣ್ಯ ಇಲಾಖೆ

ಕರಾವಳಿ ವಲಯ ನಿಯಂತ್ರಣಾಧಿಕಾರಿ ಶ್ರೀಧರ ಪಿ., ಮಂಗಳೂರು ಉತ್ತರ ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು, ಲಯನ್ಸ್ ಕ್ಲಬ್ ಮಂಗಳೂರು ಮಿಲಾಗ್ರೀಸ್ ಅಧ್ಯಕ್ಷ ತುಲಾರ್ ರೈ 

ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಶಿಬಿರದಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ್ಕ ವಿತರಣೆ ಮತ್ತು ದಂತ ಚಿಕಿತ್ಸೆ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು