12:08 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಶಿರ್ವ: ಎರಡು ಬೈಕ್ ಪರಸ್ಪರ ಡಿಕ್ಕಿ; ಹೇರೂರು ನಿವಾಸಿ ಗೃಹಿಣಿ ಸ್ಥಳದಲ್ಲೇ ಸಾವು

14/11/2021, 08:55

ಶಿರ್ವ( reporterkarnataka.com): ಎರಡು ದ್ವಿಚಕ್ರ ವಾಹನಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ‌ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಭಾಷ್ ನಗರದ ಕುರ್ಕಾಲು ಜಂಕ್ಷನ್ ನಲ್ಲಿ ನಡೆದಿದೆ.

ಮೃತರನ್ನು ಹೇರೂರು ಗ್ರಾಮದ ನಿವಾಸಿ ಶರ್ಮಿಳಾ (42) ಎಂದು ಗುರುತಿಸಲಾಗಿದೆ. ಇವರು ಉಡುಪಿ ವಿದ್ಯೋದಯ ಶಾಲೆಯಲ್ಲಿ ಪರಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಶರ್ಮಿಳಾ ಅವರು ಶನಿವಾರ ಬೆಳಿಗ್ಗೆ ತಮ್ಮ ಪತಿ ಸುರೇಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೇರೂರಿನಿಂದ ಕಟಪಾಡಿ ಕಡೆಗೆ ಹೋಗುತ್ತಿದ್ದರು. ಕುರ್ಕಾಲು ಜಂಕ್ಷನ್ ಬಳಿ ಈ ಅಪಘಾತ ನಡೆದಿದೆ. ಎದುರಿನಿಂದ ಬಂದ ಬೈಕ್ ಸವಾರ ಯಾವುದೇ ಸೂಚನೆ ನೀಡದೆ ಒಮ್ಮೆಲೆ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಬೈಕ್ ನಿಯಂತ್ರಣ ಕಳೆದುಕೊಂಡು ಎದುರಿನ ಬೈಕ್ ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಅಪಘಾತವಾದ ರಭಸಕ್ಕೆ ಶರ್ಮಿಳಾ ಅವರು ರಸ್ತೆಗೆ ಬಿದ್ದಿದ್ದು, ಇದರಿಂದ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು